ಬೀದರ್‌ | ಅನ್ನಭಾಗ್ಯ ಯೋಜನೆ : ನಗದು ಬದಲು 5ಕೆ.ಜಿ. ಅಕ್ಕಿ ವಿತರಣೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

Advertisements

ʼಅನ್ನಭಾಗ್ಯʼ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕೇಂದ್ರ ಸರ್ಕಾರದ 5ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಬ್ಯಾಂಖ್ ಖಾತೆಗೆ ನೇರವಾಗಿ ₹170 ಹಣ‌ ಜಮೆ ಮಾಡಲಾಗುತ್ತಿತ್ತು. ಆದರೆ 2025ರ ಫೆಬ್ರವರಿ ತಿಂಗಳಿಂದ ನೇರ ನಗದು ಬದಲಾಗಿ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಫೆಬ್ರುವರಿ ತಿಂಗಳ ಪಡಿತರ ವಿತರಣೆ ಪೂರ್ಣಗೊಂಡಿರುವುದರಿಂದ ಫೆಬ್ರವರಿ ತಿಂಗಳ ಹೆಚ್ಚುವರಿ ಅಕ್ಕಿಯನ್ನು ಮಾರ್ಚ್‌ ತಿಂಗಳ ಹಂಚಿಕೆಯೊಂದಿಗೆ ವಿತರಣೆ ಮಾಡಲಾಗುವುದು. ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗಳಿಗೆ ಒಟ್ಟು 15 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು. 4 ಸದಸ್ಯರಿಗಿಂತ ಕಡಿಮೆ ಇರುವ ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದುʼ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಯೋಜನೆ (ಎವೈ) 4 ಸದಸ್ಯರಿರುವ ಪಡಿತರ ಚೀಟಿದಾರರಿಗೆ 45 ಕೆ.ಜಿ ಅಕ್ಕಿ, 5 ಸದಸ್ಯರಿರುವ ಎಎವೈ ಪಡಿತರ ಚೀಟಿದಾರರಿಗೆ 65 ಕೆ.ಜಿ ಅಕ್ಕಿ ಹಾಗೂ 6 ಸದಸ್ಯರಿರುವ ಎಎವೈ ಪಡಿತರ ಚೀಟಿದಾರರಿಗೆ 85 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದು. ವಿತರಣೆ ಮಾಡಿದ ಪಡಿತರ ಅಕ್ಕಿಯನ್ನು ಪಡಿತರ ಚೀಟಿದಾರರು ಯಾವುದೇ ಕಾರಣಕ್ಕೂ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿದಾರರ ಪಡಿತರ ಚೀಟಿ ಅಮಾನತ್ತುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Advertisements

ಸಾರ್ವಜನಿಕ ವಿತರಣಾ ಪದ್ಧತಿ ಅಡಿಯಲ್ಲಿ ಯಾವುದೇ ದೂರುಗಳು ಇದ್ದಲ್ಲಿ ಆಹಾರ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದಾದ ವಿವರ:

ಬೀದರ ಗ್ರಾಮಾಂತರ ಆಹಾರ ಶಿರಸ್ತೆದಾರ ಅನಿಲ್‌ಕುಮಾರ ವ್ಯಾಸ್ (6360177221), ಬೀದರ ಗ್ರಾಮಾಂತರ ಆಹಾರ ನಿರೀಕ್ಷಕರು ಅರುಣ್‌ಕುಮಾರ (7892199014), ಬೀದರ ಪಟ್ಟಣ ಆಹಾರ ನಿರೀಕ್ಷಕರು ರಾಮರತನ ದೆಗಲಿ (9844302280), ಬೀದರ ಪಟ್ಟಣ ಆಹಾರ ನಿರೀಕ್ಷಕರು ಶೋಭಾ (9740226135), ತಾಲ್ಲೂಕು ಕಛೇರಿ ಭಾಲ್ಕಿ: ಆಹಾರ ಶಿರಸ್ತೆದಾರರು ವೆಂಕಟರಾವ (9110413724), ಆಹಾರ ನಿರೀಕ್ಷಕರು ರಾಜೇಂದ್ರಕುಮಾರ (9972460457) ತಾಲ್ಲೂಕು ಕಛೇರಿ ಹುಮನಾಬಾದ: ಆಹಾರ ಶಿರಸ್ತೆದಾರರು ಪರಮೇಶ್ವರ (9448349496), ಆಹಾರ ನಿರೀಕ್ಷಕರು ಬಿಂದುಕುಮಾರಿ (9449382228)

ಈ ಸುದ್ದಿ ಓದಿದ್ದೀರಾ? ಔರಾದ್ ಪಾಲಿಟೆಕ್ನಿಕ್‌ನಲ್ಲಿ ಒಬ್ಬರೇ ಖಾಯಂ ಉಪನ್ಯಾಸಕ : ಬೋಧಕ ಸಿಬ್ಬಂದಿ ನೇಮಕಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ

ತಾಲ್ಲೂಕು ಕಛೇರಿ ಚಿಟಗುಪ್ಪಾ: ಆಹಾರ ನಿರೀಕ್ಷಕರು ಶೇಖರ್ (9964874917), ತಾಲ್ಲೂಕು ಕಛೇರಿ ಬಸವಕಲ್ಯಾಣ: ಆಹಾರ ಶಿರಸ್ತೆದಾರರು ನಿಂಗಯ್ಯಾ (9916241166), ಆಹಾರ ನಿರೀಕ್ಷಕರು ನಾಗರಾಜ (8951753186), ದ್ವಿ.ದ.ಸ ರಾಜೇಶ್ವರಿ (9986775659), ತಾಲ್ಲೂಕು ಕಛೇರಿ ಹುಲಸೂರು: ಆಹಾರ ನಿರೀಕ್ಷಕರು ಪ್ರದೀಪ್ (8095453026), ತಾಲ್ಲೂಕು ಕಛೇರಿ ಔರಾದ (ಬಿ): ಆಹಾರ ಶಿರಸ್ತೆದಾರರು ಪರಮೇಶ್ವರ (9448349496), ಆಹಾರ ನಿರೀಕ್ಷಕರು ಪ್ರೇಮಲತಾ (9901741151), ತಾಲ್ಲೂಕು ಕಛೇರಿ ಕಮಲನಗರ: ಆಹಾರ ನಿರೀಕ್ಷಕರು ಶಿವಾನಂದ ಪಾಟೀಲ್ (9741614855)

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X