ಬೀದರ್ | ಔರಾದ್‌ ಕ್ಷೇತ್ರಕ್ಕೆ ₹300 ಕೋಟಿ ವಿಶೇಷ ಪ್ಯಾಕೇಜ್‌ ನೀಡಿ : ಭೀಮಶೇನ್‌ರಾವ ಶಿಂಧೆ ಮನವಿ

Date:

Advertisements

ಔರಾದ್‌ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸೇತುವೆ, ಶಾಲೆ, ಅಂಗನವಾಡಿ, ರೈತರ ಬೆಳೆಹಾಗೂ ಸರಕಾರಿ ಕಚೇರಿಗೆ ದುರಸ್ತಿಗೆ ₹300 ಕೋಟಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ನಿವೃತ್ತ ಸಿಎಂ ಅಪರ ಕಾರ್ಯದರ್ಶಿ, ಕಾಂಗ್ರೆಸ್‌ ಮುಖಂಡ ಡಾ.ಭೀಮಸೇನರಾವ ಶಿಂಧೆ ಮನವಿ ಮಾಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಿದರು. ʼಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆಯನ್ನು ನಡೆಸಿರುವುದು ಸ್ವಾಗತಿಸಿದ ಅವರು, ʼಔರಾದ್ ಮತ್ತು ಕಮಲನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹೆಚ್ಚು ಹಾನಿಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆ, ಚರಂಡಿ ಹಾಗೂ ಸೇತುವೆ ಅಪಾರ ಪ್ರಮಾಣ ಹಾನಿ ದುರಸ್ತಿ ಮಾಡುವುದು ಅಗತ್ಯವಾಗಿದೆʼ ಎಂದು ತಿಳಿಸಿದರು.

ಔರಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ರೈತರು ಬೆಳೆದಿದ್ದ ಅಪಾರ ಪ್ರಮಾಣ ಉದ್ದು, ಹೆಸರು, ಸೋಯಾ, ತೊಗರಿ, ಹತ್ತಿ ಇತರೆ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಕೆರೆಗಳು ಒಡೆದು ಜಮೀನಿಗೆ ನೀರು ನುಗ್ಗಿದ್ದು ಸೇರಿದಂತೆ ರೈತರ ಬವಣೆ ಕುರಿತು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿ, ಶೀಘ್ರದಲ್ಲಿ ಪರಿಹಾರ ನೀಡುವಂತೆ ಮನವರಿಕೆ ಮಾಡಿದ್ದೇನೆʼ ಎಂದರು.

Advertisements

ಅತಿವೃಷ್ಟಿಯಿಂದ ಸಾವಿರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಗರಿಷ್ಠ ಮೊತ್ತದ ಪರಿಹಾರ ಧನವನ್ನು ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಶಿಂಧೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ ಜಿಲ್ಲೆಯಲ್ಲಿ ಪ್ರವಾಹ : ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯಲ್ಲಿ ಪ್ರವಾಹ : ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿ ಹಾಗೂ ಮಾಂಜ್ರಾ ನದಿ ಮತ್ತು ಕಾರಂಜಾ...

ಉಡುಪಿ | ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ...

ವಿಜಯಪುರ | ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ತಿಂಗಳುಗಳು ಕಳೆದರೂ ಅತಿಥಿ ಉಪನ್ಯಾಕರ ನೇಮಕಾತಿ...

ಉಡುಪಿ | ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ...

Download Eedina App Android / iOS

X