ಬೀದರ್‌ | ಹೊಸ ಮಾದರಿ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹಿಸಿ ಸಿಎಂಗೆ ಮನವಿ

Date:

Advertisements

ಬೀದರ್‌ನಲ್ಲಿ ಹೊಸ ಮಾದರಿ ಮಾರುಕಟ್ಟೆ ನಿರ್ಮಿಸಬೇಕು ಎಂದು ಗಾಂಧಿ ಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಅಸೋಸಿಯೇಷನ್ ಪದಾಧಿಕಾರಿಗಳು ಬುಧವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಈ ಕುರಿತು ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ʼಸದ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆ ಪ್ರಾಂಗಣ ಕಿರಿದಾಗಿದೆ. ಸುಗ್ಗಿ ಕಾಲದಲ್ಲಿ ಕೆಲವೊಮ್ಮೆ ನಡೆಯಲು ಸಹ ಜಾಗ ಇಲ್ಲದಂಥ ಪರಿಸ್ಥಿತಿ ಎದುರಾಗುತ್ತಿದೆ. 30 ಎಕರೆಯಲ್ಲಿ ಇರುವ ಮಾರುಕಟ್ಟೆ ಬೀದರ್‍ನ ವಾಣಿಜ್ಯ ಚಟುವಟಿಕೆಗಳಿಗೆ ಬೆನ್ನೆಲುಬಾಗಿದೆ. ಅಂದು ಕೃಷಿ ಉತ್ಪನ್ನಗಳ ಆವಕ ಹಾಗೂ ವ್ಯಾಪಾರಿಗಳ ಸಂಖ್ಯೆಗೆ ಅನುಗುಣವಾಗಿ ಮಾರುಕಟ್ಟೆ ಸ್ಥಾಪಿಸಲಾಗಿದೆ. ಈಗ ವ್ಯಾಪಾರ ಚಟುವಟಿಕೆ ಹೆಚ್ಚಾಗಿದ್ದು, ಮಾರುಕಟ್ಟೆ ಸಾಕಾಗುತ್ತಿಲ್ಲʼ ಎಂದು ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಗಮನ ಹೇಳಿದರು.

Advertisements

ಕನಿಷ್ಠ 100 ಎಕರೆಯ ಹೊಸ ಮಾರುಕಟ್ಟೆ ಸ್ಥಾಪನೆ ತೀರಾ ಅವಶ್ಯಕವಾಗಿದೆ. ಒಂದು ದಶಕದಿಂದ ಇದಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತ ಬರಲಾಗುತ್ತಿದೆ. ಸರ್ಕಾರಕ್ಕೆ ಅನೇಕ ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ.ಈಗಲಾದರೂ ನೂತನ ಹಾಗೂ ಸುಸಜ್ಜಿತ ಮಾರುಕಟ್ಟೆಯ ಬಹು ದಿನಗಳ ಕನಸು ನನಸಾಗಿಸಬೇಕು. ಜಿಲ್ಲೆಯ ರೈತರ ಹಾಗೂ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಜೆಪಿ ಪಕ್ಷದಿಂದ ಮಾತ್ರ ದಲಿತರ ಉದ್ದಾರ ಸಾಧ್ಯ : ಛಲವಾದಿ ನಾರಾಯಣಸ್ವಾಮಿ

ನಿಯೋಗದಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ನಾಗಶೆಟ್ಟೆಪ್ಪ ದಾಡಗಿ, ಕಾರ್ಯದರ್ಶಿ ಭಗವಂತ ಔದತ್ತಪುರ, ಸಹ ಕಾರ್ಯದರ್ಶಿ ನಾಗಶೆಟ್ಟಿ ಕಾರಾಮುಂಗಿ, ಖಜಾಂಚಿ ಬಂಡೆಪ್ಪ ಗಡ್ಡೆ, ಹಿರಿಯ ವ್ಯಾಪಾರಿಗಳಾದ ಅಣ್ಣಾರಾವ್ ಮೊಗಶೆಟ್ಟಿ, ಮಲ್ಲಿಕಾರ್ಜುನ ಹತ್ತಿ, ಚಂದ್ರಪ್ಪ ಹಳ್ಳಿ, ವೀರಭದ್ರಪ್ಪ ಪಾಟೀಲ ಕನ್ನಳ್ಳಿ, ಗೋವಿಂದರಾವ್ ನೀಲಮನಳ್ಳಿ, ವಿವೇಕಾನಂದ ಧನ್ನೂರ, ಗುಂಡಪ್ಪ ಎಮ್ಮೆ, ನಾಗರಾಜ ನಂದಗಾಂವ್, ಪ್ರಶಾಂತ ಉದಗಿರೆ, ಗಿರೀಶ್ ಪಾಟೀಲ, ರಾಜಕುಮಾರ ಹಜ್ಜರಗಿ, ಪ್ರಕಾಶ ಗೌಡಪ್ಪನೋರ್ ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X