ಬೀದರ್ | ಮಕ್ಕಳನ್ನು ಕೈ ಬೀಸಿ ಕರೆಯುವ ‘ಅರಿವು ಕೇಂದ್ರ’

Date:

Advertisements

ಬೀದರ ತಾಲ್ಲೂಕಿನ ಅಲಿಯಾಬಾದ್ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಿದ ಅರಿವು ಕೇಂದ್ರ ಬೇಸಿಗೆಯಲ್ಲಿ ಮಕ್ಕಳಿಗೆ ಆಟ, ಓದು ಹಾಗೂ ಕೌಶಲ್ಯ ತರಬೇತಿ ತಾಣವಾಗಿ ಮಾರ್ಪಟ್ಟಿದೆ.

ಅರಿವು ಕೇಂದ್ರದಲ್ಲಿ ದಿನಪತ್ರಿಕೆಗಳು ಸೇರಿದಂತೆ ಕಥೆ ಕಾದಂಬರಿ, ಕಲೆ, ಸಾಹಿತ್ಯ, ನಾಟಕ, ಇತಿಹಾಸ, ಆರೋಗ್ಯ, ಕೃಷಿ, ಶಿಕ್ಷಣ, ಪಠ್ಯ ಪುಸ್ತಕ, ವಿಜ್ಞಾನ, ಚರಿತ್ರೆ, ಕಾನೂನು, ಪಂಚಾಯತ್ ರಾಜ್, ಸ್ಪರ್ಧಾತ್ಮಕ ಪುಸ್ತಕಗಳು ಸೇರಿದಂತೆ ಒಟ್ಟಾರೆ 4 ಸಾವಿರ ಪುಸ್ತಕಗಳಿವೆ.

ಮಕ್ಕಳು ದಿನಪತ್ರಿಕೆ, ಪುಸ್ತಕ ಓದುವ ಹವ್ಯಾಸ ಬೆಳೆಸುವ ಜೊತೆಗೆ ಕಂಪ್ಯೂಟರ್, ಪೇಂಟಿಂಗ್ ತರಬೇತಿ ಸಹ ನೀಡಲಾಗುತ್ತದೆ. ದೇಸಿ ಕ್ರೀಡೆಗಳ ಝಲಕ್ ಸಹ ಇಲ್ಲಿ ನೋಡಲು ಸಿಗುತ್ತದೆ. ರೈತರ, ಕೂಲಿ ಕಾರ್ಮಿಕರ, ನರೇಗಾ ಕಾರ್ಮಿಕರ ಮಕ್ಕಳಿಗಾಗಿ ಈ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು, ಮಕ್ಕಳಿಗೆ ಆಟ, ಪಾಠದ ಜೊತೆಗೆ ತಂತ್ರಜ್ಞಾನ ತರಬೇತಿ, ಐತಿಹಾಸಿಕ ಪರಂಪರೆ ಕಲಿಸುವ ಪ್ರಯತ್ನ ಮುಂದುವರೆದಿದೆ.

Advertisements
1003749141
ಕಂಪ್ಯೂಟರ್‌ ಕಲಿಕೆಯಲ್ಲಿ ತಲ್ಲೀನರಾದ ವಿದ್ಯಾರ್ಥಿಗಳು

ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೀದರ ಕೋಟೆ, ಕರೇಜ್, ಪಾಪನಾಶ ಕೆರೆ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ಮಾಹಿತಿ ನೀಡಲಾಗಿದೆ. ಮಕ್ಕಳೆಲ್ಲರೂ ಅಲ್ಲೇ ವನಭೋಜನ ಸವಿದದ್ದು ವಿಶೇಷವಾಗಿತ್ತು.

’15ನೇ ಹಣಕಾಸು ಯೋಜನೆಯ ಆರ್‌ಡಿಪಿಆರ್‌ನ ಓದು ಬೆಳಕು ಯೋಜನೆಯಡಿ ಈ ಅರಿವು ಕೇಂದ್ರ ಸ್ಥಾಪಿಸಲಾಗಿದ್ದು. ಗ್ರಾಮೀಣ ಭಾಗದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಧ್ಯೇಯದೊಂದಿಗೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಹೇಳಿದರು.

ಇದನ್ನೂ ಓದಿ : ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!

1003749142
ಆಟದಲ್ಲಿ ತೊಡಗಿರುವ ವಿದ್ಯಾರ್ಥಿಗಳು

ಅಲಿಯಾಬಾದ್ ಗ್ರಾಮ ಪಂಚಾಯಿತಿ ಪಿಡಿಒ ಶರತ್‌ಕುಮಾರ್ ಮಾತನಾಡಿ, ‘ಅರಿವು ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ದಿನನಿತ್ಯ ಸಾಕಷ್ಟು ಮಕ್ಕಳು ಇಲ್ಲಿಗೆ ಓದಲು ಬರುತ್ತಿರುವುದು ಕಂಡು ಖುಷಿ ತರಿಸಿದೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X