ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲೂಕಿನ ವಿಜಯನಗರ ತಾಂಡಾದ ರೈತನೊಬ್ಬ ತನ್ನ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆ ಮಾಡಿದ್ದು, ರೈತನನ್ನು ಬಂಧಿಸಿದ್ದಾರೆ. ಆರೋಪಿ ರೈತ ಶಿವಾಜಿ ರಾಠೋಡ್ 179ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆತನನ್ನು ಬಂಧಿಸಿ 25.54 ಲಕ್ಷ ರೂ. ಮೌಲ್ಯ ಮೌಲ್ಯದ, 63.86ಕೆಜಿ ಗಾಂಜಾ ಗಿಡಗಳು ಜಪ್ತಿ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಔರಾದ ಸಿಪಿಐ ರಘುವೀರಸಿಂಗ್ ಠಾಕೂರ್ ನೇತೃತ್ವದಲ್ಲಿ, ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಅವರ ಸಮಕ್ಷಮದಲ್ಲಿ ಸಂತಪುರ ಮತ್ತು ಚಿಂತಾಕಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಶಿವಾಜಿ ರಾಠೋಡ್ ತನ್ನ ಜಮೀನಿನ ಸರ್ವೆ ಸಂಖ್ಯೆ 85ರಲ್ಲಿ ಹತ್ತಿ ಮತ್ತು ತೊಗರಿ ಬೆಳೆ ನಡುವೆ ಅಲ್ಲಲ್ಲಿ ಸುಮಾರು 179 ಗಾಂಜಾ ಗಿಡಗಳು ಬೆಳೆದಿರುವುದು ಪತ್ತೆಯಾಗಿತ್ತು. ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.