ಬೀದರ್‌ | ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನಕ್ಕೆ ಖಂಡನೆ

Date:

Advertisements

ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನವನ್ನು ಖಂಡಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯಿಂದ ಬೀದರ್ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ಕರ್ನಾಟಕದಲ್ಲಿ ಕನ್ನಡವೇ ತಾಯಿ. ಆದರೆ, ಸರ್ಕಾರದ ಕಾರ್ಯ ವೈಖರಿಯಿಂದ ಧೋರಣೆ ಉಂಟಾಗಿರುವುದು ದುರ್ದೈವದ ಸಂಗತಿ. ಬೆಂಗಳೂರಿನಲ್ಲಿ ಐಟಿಬಿಟಿ ಕಂಪನಿಗಳು, ಹೊರನಾಡಿನಿಂದ ಬಂದ ವ್ಯಾಪರಿಗಳ ಅಂಗಡಿಗಳ ಮೇಲೆ ಕನ್ನಡ ಹೊರತು ಪಡಿಸಿ ಬೇರೆ ಭಾಷೆಯ ನಾಮಫಲಕಗಳು ರಾರಾಜಿಸುತ್ತಿರುವಾಗ ಕರ್ನಾಟಕ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರಿಗಳು ಕುಂಭಕರಣನಂತೆ ನಿದ್ರೆಗೆ ಜಾರಿವೆ. ಆದ್ದರಿಂದ ಕನ್ನಡಪರ ಸಂಘಟನೆಗಳು ಜಾಗೃತರಾಗಿ ಅನ್ಯಭಾಷೀಯ ನಾಮಫಲಕಗಳನ್ನು ಕಿತ್ತು ಹಾಕಿರುವುದು ಹೆಮ್ಮೆಯ ಸಂಗತಿ. ಆದರೆ ಕರ್ನಾಟಕ ಸರ್ಕಾರ ಅವರನ್ನು ಬಂಧಿಸಿ, ಜೈಲಿಗೆ ಹಾಕಿರುವುದು ಬ್ರಿಟೀಷರು ಸ್ವಾತಂತ್ರ್ಯ ಸೈನಾನಿಗಳ ಮೇಲೆ ದಬ್ಬಾಳಿಕೆ ಮಾಡಿದಂತಾಗಿದೆ. ಇದು ಕರ್ನಾಟಕ ಸರ್ಕಾರವೇ, ಕನ್ನಡ ವಿರೋಧಿ ಸರ್ಕಾರವೇ ತಿಳಿಯದಾಗಿದೆ” ಎಂದು ಸಂಘಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

“ಬೆಂಗಳೂರಿನಲ್ಲಷ್ಟೇ ಅನ್ಯ ಭಾಷೆಯ ನಾಮಫಲಕಗಳಿಲ್ಲ. ನಮ್ಮ ಬೀದರ್ ಜಿಲ್ಲೆಯಲ್ಲಿಯೂ ಕನ್ನಡವನ್ನು ನಿರ್ಲಕ್ಷಿಸಲಾಗಿದೆ. ಎರಡು ತಿಂಗಳೊಳಗೆ ಈ ಎಲ್ಲ ನಾಮಫಲಕಗಳ ಮೇಲೆ ಕನ್ನಡ ರಾರಾಜಿಸಬೇಕು. ಇಲ್ಲವಾದಲ್ಲಿ ಬೀದರ್ ಜಿಲ್ಲೆಯಲ್ಲಿ ಬೀದಿ ಹೋರಾಟಕ್ಕೆ ಇಳಿಯಲು ಸರ್ಕಾರ ಮತ್ತು ಜಿಲ್ಲಾಡಳಿತವೇ ಅವಕಾಶ ಕಲ್ಪಿಸಿದಂತಾಗುತ್ತದೆ.‌ ಬೆಂಗಳೂರಿನಲ್ಲಿ ಬಂಧಿಸಿರುವ ಕನ್ನಡ ಹೋರಾಟಗಾರರನ್ನು ಶೀಘ್ರ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಸರ್ಕಾರದ ಕ್ರಮ ಖಂಡಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಮದ್ಯದಗಂಡಿ ತೆರವಿಗೆ ರೈತ ಸಂಘ ಆಗ್ರಹ

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಟಿ ಮಿರ್ಜಾಪೂರ, ಪ್ರಧಾನ ಕಾರ್ಯದರ್ಶಿ ಬಕ್ಕಪ್ಪಾ ನಾಗೂರಾ, ಕಾರ್ಯದರ್ಶಿ ವಿದ್ಯಾಸಾಗರ, ವಿಶ್ವನಾಥ ಉಪ್ಪೆ, ರಮೇಶ ಬಿರಾದಾರ, ಅನಿಲ್ ಕುಮಾರ್, ಅಟಂಗೆ ಶಿವಾಜಿ ದದ್ದಾಪುರ್, ಶಂಕರ್ ರಾವ್ ಸಜ್ಜನ್, ನಾಗೇಶ್ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X