ಬೀದರ್‌ | ಆತ್ಮಹತ್ಯೆಗೆ ಮುಂದಾದ ರೈತನ ಸಮಸ್ಯೆ ಬಗೆಹರಿಸಿದ‌ ಬಸವಕಲ್ಯಾಣ ತಹಸೀಲ್ದಾರ್

Date:

Advertisements

ಜಮೀನಿಗೆ ಹೋಗುವ ದಾರಿಯಲ್ಲಿ ಅಡೆತಡೆಯಾಗಿದ್ದು, ಈ ಬಗ್ಗೆ ಹಲವು ಬಾರಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ರೈತ ಪ್ರಶಾಂತ ಲಕಮಾಜಿ ಅವರು ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ಸೋಮವಾರ ತಹಶೀಲ್ದಾರ್ ಕಚೇರಿ ಎದುರುಗಡೆ ಧರಣಿ ಕುಳಿತಿದ್ದರು.

ರೈತ ಪ್ರಶಾಂತ ಲಕಮಾಜಿ ಹೊಲಕ್ಕೆ ಹೋಗುವ ದಾರಿಯಲ್ಲಿ ಕೆಲ ರೈತರು ಪೈಪ್‌ಲೈನ್‌ ಅಳವಡಿಸಿದ್ದು ಅದನ್ನು ತೆಗೆಯಲು ಅನೇಕ ವರ್ಷಗಳಿಂದ ಆಗ್ರಹಿಸುತ್ತಿದ್ದರೂ ಯಾರೂ ಕ್ರಮ ತೆಗೆದುಕೊಂಡಿಲ್ಲ. ಒಂದು ವೇಳೆ ಶೀಘ್ರ ಕೆಲಸ ಆಗದಿದ್ದರೆ ಇಲ್ಲೇ ನೇಣು ಬಿಗಿದುಕೊಳ್ಳುತ್ತೇನೆ ಎಂದು ಬೆದರಿಕೆಯೊಡ್ಡಿದರು.

ಇದನ್ನು ಮನಗಂಡ ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ ಅವರು ರೈತನ ಧರಣಿಗೆ ಮಣಿದು ಸರ್ಕಾರಿ ನಾಲಾದಲ್ಲಿ ಅಳವಡಿಸಲಾದ ಪೈಪ್‌ಲೈನ್ ತೆರವುಗೊಳಿಸಿ ರೈತರ ಹೊಲಕ್ಕೆ ಹೋಗಲು ದಾರಿ ಮಾಡಿಕೊಡಬೇಕೆಂದು ಆದೇಶ ಹೊರಡಿಸುವ ಮುಖಾಂತರ ಸಮಸ್ಯೆ ಇತ್ಯರ್ಥಗೊಳಿಸಿದ್ದಾರೆ.

Advertisements

ʼತಹಸೀಲ್ದಾರ್‌ ಅವರ ಆದೇಶ ಬೆನ್ನಲೇ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣ ರೈತನ ಜಮೀನಿಗೆ ತೆರಳಿ ಬುಲ್ಡೋಜರ್‌ ದಿಂದ ಪೈಪ್‌ಲೈನ್ ತೆರವುಗೊಳಿಸಿ ದಾರಿ ಮಾಡಿಕೊಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ಇದ್ದ ಸಮಸ್ಯೆಗೆ ತಹಸೀಲ್ದಾರ್‌ ಅವರು ಸ್ಪಂದಿಸಿ ಸಮಸ್ಯೆ ಬಗೆಹರಿಸಿದ ಬಳಿಕ ಧರಣಿ ಹಿಂಪಡೆಯಲಾಗಿದೆʼ ಎಂದು ಪ್ರಶಾಂತ ಲಕಮಾಜಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಬಗೆಹರಿಯದ ಜಮೀನು ದಾರಿ ಸಮಸ್ಯೆ: ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ರೈತ

ಧರಣಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆನಂದ ಪಾಟೀಲ, ಮುಖಂಡ ಶಿವಾ ಕಲ್ಲೋಜಿ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X