ಬೀದರ್‌ | ತಂಗಿಯನ್ನು ಪ್ರೀತಿಸಿದಕ್ಕೆ ಯುವಕನನ್ನು ಕೊಲೆಗೈದ ಸಹೋದರರು

Date:

Advertisements

ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಸಹೋದರರಿಬ್ಬರು ಬರ್ಬರವಾಗಿ ಕೊಲೆಗೈದ ಘಟನೆ ಬಸವಕಲ್ಯಾಣ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನಿರುಗುಡಿ ಗ್ರಾಮದ ಪ್ರಶಾಂತ ಬಿರಾದರ್ (25) ಕೊಲೆಯಾದ ಯುವಕ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ, ಈ ವಿಷಯ ಯುವತಿಯ ಸಹೋದರರಿಗೆ ಗೊತ್ತಾಗಿದೆ. ಸಹೋದರರು ತಂಗಿಯಿಂದ ದೂರ ಇರುವಂತೆ ಯುವಕನನ್ನು ಹೇಳಿದ್ದರು, ಆದರೂ ಪ್ರಶಾಂತ್ ಪ್ರೀತಿಸುವುದು ಹಾಗೇ ಮುಂದುವರಿಸಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕೆ ಶುಕ್ರವಾರ (ಮಾ.28) ರಾತ್ರಿ ನಿರಗುಡಿ ಗ್ರಾಮದಲ್ಲಿ ಮೃತ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದ್ದು, ಗಲಾಟೆ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ವಿಷಯ ತಿಳಿದು ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪ್ರಕರಣದ ಇಬ್ಬರು ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೃತ ಯುವಕನ ತಂದೆ ಭರತ್‌ ಬಿರಾದಾರ್‌ ನೀಡಿದ ದೂರಿನ ಮೇರೆಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X