ಬೀದರ್‌ | 10 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬುಡಾ ಆಯುಕ್ತ

Date:

Advertisements

ಕೃಷಿಯೇತರ ಜಮೀನಿನ (ಎನ್‌ಎ) ನಿವೇಶನಗಳ ಮಾರಾಟದ ಅನುಮತಿಗಾಗಿ ₹10 ಲಕ್ಷ ನಗದು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬುಡಾ ಆಯುಕ್ತ ಶ್ರೀಕಾಂತ ಚಿಮಕೋಡೆ, ಸದಸ್ಯ ಚಂದ್ರಕಾಂತ ರೆಡ್ಡಿ ಹಾಗೂ ಇವರ ಆಪ್ತ ಸಿದ್ದು ಹೂಗಾರ ಎಂಬಾತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೀದರ್ ನಗರದ ಚಿಕ್ಕಪೇಟೆಯಲ್ಲಿ ಸರ್ವೇ ನಂಬರ್‌ 26ರಲ್ಲಿ ಕೃಷಿಯೇತರ ಜಮೀನಿನ ಶೇ 60ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಿ, ಅವುಗಳ ಮಾರಾಟಕ್ಕೆ ಅನುಮತಿ ಕೊಡಲು ಶ್ರೀಕಾಂತ ಹಾಗೂ ಚಂದ್ರಕಾಂತ ಅವರು ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹10 ಲಕ್ಷ ಮುಂಗಡ ಕೊಡುವುದರ ಬಗ್ಗೆ ಮಾತುಕತೆಯಾಗಿತ್ತು. ಬೀದರ್‌ನ ಪ್ರತಾಪ ನಗರದ ದಾಲ್‌ಮಿಲ್‌ ಸಮೀಪ ಶ್ರೀಕಾಂತ ಹಾಗೂ ಚಂದ್ರಕಾಂತ ಅವರ ಆಪ್ತ ಸಿದ್ದು ಹೂಗಾರ ಎಂಬಾತ ₹10 ಲಕ್ಷ ನಗದು ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿ, ನಗದು ಹಣದೊಂದಿಗೆ ವಶಕ್ಕೆ ಪಡೆಯಲಾಯಿತು. ಆನಂತರ ಶ್ರೀಕಾಂತ ಹಾಗೂ ಚಂದ್ರಕಾಂತ ಅವರನ್ನೂ ವಶಕ್ಕೆ ಪಡೆಯಲಾಗಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಅದಾನಿ ಬಂಧನ ಏಕಿಲ್ಲ, ಅವರನ್ನು ರಕ್ಷಿಸುತ್ತಿರುವವರು ಯಾರು: ಸಿದ್ದರಾಮಯ್ಯ ಪ್ರಶ್ನೆ

ರಿಯಲ್‌ ಎಸ್ಟೇಟ್‌ ಉದ್ಯಮಿ ಸತೀಶ ನೌಬಾದೆ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಕಲಬುರಗಿ ಲೋಕಾಯುಕ್ತ ಎಸ್ಪಿ ಉಮೇಶ ಬಿ.ಕೆ. ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಹಣಮಂತರಾಯ, ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಸಂತೋಷ ರಾಠೋಡ್‌, ಬಾಬಾಸಾಹೇಬ್‌ ಪಾಟೀಲ, ಅರ್ಜುನಪ್ಪ, ಸಿಬ್ಬಂದಿ ವಿಷ್ಣುರಡ್ಡಿ, ಶ್ರೀಕಾಂತ, ಶಾಂತಲಿಂಗಪ್ಪ, ವಿಜಯಶೇಖರ, ಅಡೆಪ್ಪ, ಕಿಶೋರಕುಮಾರ, ಕುಶಾಲ, ಭರತ, ಶುಕ್ಲೋಧನ, ಸುವರ್ಣಾ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X