ಬೀದರ್ | ಸಮಾನತೆ ಪ್ರತಿಪಾದಿಸಿದ ಬುದ್ಧ, ಬಸವ, ಅಂಬೇಡ್ಕರ್ : ವಿಠ್ಠಲದಾಸ ಪ್ಯಾಗೆ

Date:

Advertisements

ಜಗತ್ತಿಗೆ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಸಮಾನತೆ ಸಾರಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಹೇಳಿದರು.

ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುದ್ಧ ಬಸವ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡ ಸಮತೆಯ ಮಾರ್ಗದಲ್ಲಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮತೆ ಸಾಧ್ಯವಾದರೆ ಪ್ರಪಂಚದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂಬುದನ್ನು ಅರಿಯಬೇಕಿದೆ, ಈ ನಿಟ್ಟಿನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆ ಪ್ರಸ್ತುತ ಎನಿಸುತ್ತವೆ. ಬುದ್ಧನ ಶಾಂತಿ ಸಂದೇಶ, ಬಸವಣ್ಣನವರ ಸಮಾನತೆ ಕಾಯಕ ಮತ್ತು ದಾಸೋಹ ಹಾಗೂ ಅಂಬೇಡ್ಕರ್ ಅವರ ಸಮ ಸಮಾಜದ ಪರಿಕಲ್ಪನೆ ಹಿಂದೆಂದಿಗಿಂತಲೂ ಇಂದು ಹೆಚ್ಚು ಅವಶ್ಯಕವಾಗಿವೆ’ ಎಂದರು.

Advertisements

‘ಬುದ್ಧ, ಬಸವ, ಅಂಬೇಡ್ಕರ್ ಅವರ ವೈಚಾರಿಕ ನಿಲುವು ಭ್ರಮೆಯ ಲೋಕದಿಂದ ವಾಸ್ತವ ಲೋಕದ ಕಡೆಗೆ ಕರೆದೊಯ್ಯುತ್ತವೆ, ಹಾಗಾಗಿ ಈ ಮೂವರ ಚಿಂತನೆಗಳು ಪಾಲಿಸಿದರೆ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ’ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಬಿ.ಎಂ ಅಮರವಾಡಿ ಮಾತನಾಡಿ, ‘ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಗಳಿಂದ ಬದುಕು ಕಟ್ಟಿಕೊಳ್ಳಬೇಕಿದೆ, ಅವರು ಬೆಳಗಿದ ದೀಪ ಸೀಮಾತೀತ. ಬುದ್ಧ ಬಸವ ಅಂಬೇಡ್ಕರ್ ಚಿಂತನೆಗಳು ಅಳವಡಿಸಿಕೊಳ್ಳದ ಭಾರತ ಊನವಾಗುತ್ತದೆ’ ಎಂದರು.

1003676202
ಕಸಾಪ ತಾಲೂಕು ಪದಾಧಿಕಾರಿಗಳಿಗೆ ಗೌರವಿಸಲಾಯಿತು.

ವಿಶೇಷ ಸನ್ಮಾನ ಸ್ವೀಕರಿಸಿದ ಅಡವೆಪ್ಪ ಪಟ್ನೆ ಜಾನಪದ ಗೀತೆಗಳ ಮೂಲಕ ಶರಣರ ವೈಚಾರಿಕ ವಿಚಾರಗಳನ್ನು ಪ್ರಸ್ತುತಪಡಿಸಿದರು. ಪ್ರಾಚಾರ್ಯ ಡಾ. ಗೌತಮ ಗಾಯಕವಾಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಧಕ ವಿದ್ಯಾರ್ಥಿಗಳಿಗೆ ಗೌರವ:

ಎಸ್ಸೆಸ್ಸೆಲ್ಸಿ ವಿಭಾಗದಲ್ಲಿ ಸಾಧನೆಗೈದ ಆದರ್ಶ, ಆದಿತ್ಯ, ನಿವೇದಿತಾ, ಕಾರ್ತಿಕ ಮತ್ತು ಐಶ್ವರ್ಯ, ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಆರತಿ, ಶಿಫಾ, ಶಿವಕರ್ಣಾ, ಕಲಾ ವಿಭಾಗದ ಸುಧಾರಾಣಿ, ಕೀರ್ತನಾ, ವಾಣಿಜ್ಯ ವಿಭಾಗದ ಅಂಬಿಕಾ ಹಾಗೂ ಶ್ವೇತಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಬಳಿಕ ತಾಲೂಕು ಕಸಾಪ ಪದಾಧಿಕಾರಿಗಳಿಗೆ ಹಾಗೂ ವಿವಿಧ ವಲಯ ಘಟಕಗಳ ಅಧ್ಯಕ್ಷರಿಗೆ ನೇಮಕ ಪತ್ರ ನೀಡಿ ಅಭಿನಂದಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ ಮೇಲ್ದೋಡ್ಡಿ, ಆರ್.ಆರ್.ಕೆ ಸಮಿತಿ ಸದಸ್ಯ ರವೀಂದ್ರ ಮೀಸೆ, ಕಸಾಪ ಗೌರವಾಧ್ಯಕ್ಷ ಡಾ.ವೈಜಿನಾಥ ಬುಟ್ಟೆ, ಡಾ.ಮನ್ಮಥ ಡೋಳೆ, ಗುರುನಾಥ ದೇಶಮುಖ, ವೀರೇಶ ಅಲ್ಮಾಜೆ, ಮಲ್ಲಿಕಾರ್ಜುನ ಟಂಕಸಾಲೆ, ಜಗನ್ನಾಥ ದೇಶಮುಖ, ಮಹಾದೇವ ಘೂಳೆ, ಖಂಡೋಬಾ ಕಂಗಟೆ, ಸಂದೀಪ ಪಾಟೀಲ, ಅಮರಸ್ವಾಮಿ ಸ್ಥಾವರಮಠ, ಅಂಬಾದಾಸ ನೆಳಗೆ, ಧನರಾಜ ಮಾನೆ, ಗೋವಿಂದ ಪಾಟೀಲ, ಕೈಲಾಸಪತಿ ಕೇದಾರೆ, ಉತ್ತಮ ದಂಡೆ, ಉತ್ತಮ ಜಾಧವ, ಶ್ವೇತಾ ಆಲೂರ, ಶಿವರಾಮ ರಾಠೋಡ, ಕಪಿಲ ಡೋಣಗಾಂವೆ, ತುಳಸಿರಾಮ ಮಾನೆ, ಆರತಿ, ಪ್ರಿಯಾ ಮಿಲಿಂದ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X