ಬೀದರ್‌ | ಜನಿವಾರ ಪ್ರಕರಣದ ಹಿಂದೆ ಬಿ.ವೈ.ವಿಜಯೇಂದ್ರ ಷಡ್ಯಂತ್ರ : ಅರವಿಂದಕುಮಾರ್‌ ಅರಳಿ ಆರೋಪ

Date:

Advertisements

ಬೀದರ್‌ನಲ್ಲಿ ಜನಿವಾರ ಧರಿಸಿದ ಕಾರಣಕ್ಕಾಗಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಪ್ರಕರಣದ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಷಡ್ಯಂತ್ರ ಆಗಿದೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ್‌ ಅರಳಿ ಗಂಭೀರ ಆರೋಪ ಮಾಡಿದ್ದಾರೆ.

ʼವಿದ್ಯಾರ್ಥಿ ಸುಚಿವೃತನ ಜನಿವಾರದ ಪ್ರಕರಣದಲ್ಲಿ ವಾಸ್ತವವಾಗಿ ನಡೆದದ್ದೇನು? ಎಂಬುವುದು ತಿಳಿದುಕೊಳ್ಳಬೇಕು. ಈ ಪ್ರಕರಣ ಇಷ್ಟೊಂದು ದೊಡ್ಡದು ಮಾಡಲು ಕಾರಣವೇನೆಂಬುದು ಜನರು ಅರ್ಥ ಮಾಡಿಕೊಳ್ಳವುದು ಬಹಳ ಅವಶ್ಯಕತೆ ಇದೆʼ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ಸುಚಿವೃತ‌ ಕುಲಕರ್ಣಿ ಮೊದಲನೆ ದಿನ ಕೆ-ಸಿಇಟಿ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗಿಲ್ಲ. ಬೀದರ್‌ ನಗರಕ್ಕೆ ಬಿಜೆಪಿಯ ಜನಾಕ್ರೋಶ ಜಾಥಾ ಬರುವ ಸಂದರ್ಭದಲ್ಲೇ ಈ ಪ್ರಕರಣ ಬೆಳಕಿಗೆ ಬರಲು ಕಾರಣವೇನು? ಇನ್ನು, ಸುಚಿವೃತನು ಜನಿವಾರದೊಂದಿಗೆ ಒಂದು ಗೋಲಾಕರದ ಲೋಹದ ವಸ್ತು ಕಟ್ಟಿಕೊಂಡು ಬಂದಿದ್ದರು. ಅದನು ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದ್ದಕ್ಕೆ ಅವರು ಅದಕ್ಕೆ ಒಪ್ಪದೆ ಮನೆಗೆ ವಾಪಸ್ ಹೋಗಿದ್ದಾರೆ. ಆದರೆ, ಬಿಜೆಪಿಯವರು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಮ್ಮಕ್ಕು ನೀಡುತ್ತಿದ್ದಾರೆʼ ಎಂದು ಆರೋಪಿಸಿದರು.

Advertisements

ಒಂದು ವೇಳೆ ಈ ಪ್ರಕರಣ ಸತ್ಯವಿದ್ದಲ್ಲಿ ತೀವ್ರವಾಗಿ ಖಂಡಿಸುತ್ತೇನೆ, ದೇಶದಲ್ಲಿ ಎಲ್ಲ ಧರ್ಮದವರಿಗೆ ಅವರವರ ಪದ್ದತಿ ಅನುಸರಿಸಲು ಯಾರೂ ಅಡ್ಡಿ ಪಡಿಸುವಂತಿಲ್ಲ. ಹಾಗಾಗಿ ಈ ಕೃತ್ಯವನ್ನು ಜರುಗಿಸಿದ ವ್ಯಕ್ತಿಗೆ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ʼರಾಜ್ಯ ಸರ್ಕಾರವು ಜಾತಿ ಸಮೀಕ್ಷೆಯ ವರದಿ ಸಾರ್ವಜನಿಕವಾಗಿ ಪ್ರಕಟಿಸಲು ಮುಂದಾಗಿರುವ ಸಂದರ್ಭದಲ್ಲೇ ಬಿಜೆಪಿ ಪಟಾಲಂ ಈ ಕೆಲಸ ಮಾಡಿದೆ. ಇದರ ಹಿಂದಿನ ರಾಜಕೀಯ ಪಿತೂರಿ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು. ಅವರವರ ಧರ್ಮ ಅನುಸರಿಸಲು ಪ್ರತಿಯೊಬ್ಬರಿಗೂ ಸ್ವಾತಂತ್ರ್ಯವಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಸಿಲಿಂಡರ್‌ ಸೇರಿದಂತೆ ಎಲ್ಲ ರೀತಿಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಈ ವಿಷಯಗಳನ್ನು ಮರೆಮಾಚಲು ಬಿಜೆಪಿ ರಾಜಕೀಯ ಷಡ್ಯಂತ್ರ ಮಾಡಿರಬಹುದು. ಆದಕಾರಣ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆʼ ಎಂದು ಅರಳಿ ಅಭಿಪ್ರಾಯ ಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X