ಬೀದರ್‌ | ಎಂಎಲ್‌ಸಿ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

Date:

ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್‌ ಅವರು ಕಲಬುರ್ಗಿ ಜಿಲ್ಲಾಧಿಕಾರಿಗಳ ವಿರುದ್ಧ ನೀಡಿದ ಕೀಳುಮಟ್ಟದ ಹಾಗೂ ಅಸಂವಿಧಾನಾತ್ಮಕ ಹೇಳಿಕೆಗಳನ್ನು ಖಂಡಿಸಿ ಸೋಮವಾರ ಬೀದರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ನಗರದ ಡಾ. ಬಿ ಆರ್ ಅಂಬೇಡ್ಕರ್‌ ವೃತ್ತದಲ್ಲಿ ಸಂಸದ ಸಾಗರ್‌ ಖಂಡ್ರೆ ನೇತೃತ್ವದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಬಿಜೆಪಿ ಹಾಗೂ ಎಂಎಲ್ಸಿಗಳಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ವಿರುದ್ಧ ಘೋಷಣೆ ಕೂಗಿದರು.

ಸಂಸದ ಸಾಗರ್‌ ಖಂಡ್ರೆ ಮಾತನಾಡಿ, ʼಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಪಕ್ಷ ನಾಯಕರಿಂದ ಈ ರೀತಿಯ ವೈಯಕ್ತಿಕ ಟೀಕೆಗಳು ಹಾಗೂ ಅಸಂವಿಧಾನಾತ್ಮಕ ಪದಗಳ ಬಳಕೆ ಶೋಭೆ ತರುವುದಲ್ಲ. ಸರ್ಕಾರ ತಪ್ಪು ಮಾಡಿದರೆ, ಆ ತಪ್ಪುಗಳನ್ನು ಚರ್ಚೆಗೆ ತರಬೇಕು, ಸರಿದಾರಿಗೆ ತರಬೇಕು ಅದು ಪ್ರತಿಪಕ್ಷದ ಪ್ರಮುಖ ಹೊಣೆಗಾರಿಕೆ. ಆದರೆ ವೈಯಕ್ತಿಕ ನಿಂದನೆ ಮಾಡುವ ಪ್ರವೃತ್ತಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆʼ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಮುಖಂಡರಾದ ಭೀಮಸೇನರಾವ್‌ ಸಿಂಧೆ ಮಾತನಾಡಿ, ʼಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗರಡಿಯಲ್ಲಿ ಬೆಳೆದ ನಾರಾಯಣಸ್ವಾಮಿ ಅವರು ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಈ ರೀತಿ ವೈಯಕ್ತಿಕ ಟೀಕೆ ಮಾಡುವುದು ಖಂಡನೀಯವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯರಾದ ಎನ್.ರವಿಕುಮಾರ್‌ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕುʼ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ್‌ ಪಾಟೀಲ್‌, ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್‌, ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ, ಮಾಜಿ ಎಂಎಲ್ಸಿ ಅರವಿಂದಕುಮಾರ್‌ ಅರಳಿ ಸೇರಿದಂತೆ ಪ್ರಮುಖರಾದ ಅಭಿಷೇಕ ಪಾಟೀಲ್‌, ಸಚಿನ್‌ ಮಲ್ಕಾಪುರೆ, ಗೀತಾ ಪಂಡಿತ ಚಿದ್ರಿ, ರಾಜಶ್ರೀ ಶ್ರೀಕಾಂತ್‌ ಸ್ವಾಮಿ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

[Float-Menu id="1"]

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411...

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ...

ವಿಜಯಪುರ | ತಂಬಾಕು ಸೇವನೆಯತ್ತ ಯುವಕರ ಸೆಳೆತ; ಶ್ರೀಕಾಂತ ಪೂಜಾರ ಕಳವಳ

ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ...

ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ...

Download Eedina App Android / iOS

X