ಬೀದರ್‌ | ಸರ್ಕಾರಿ ಶಾಲೆಗಳ ಸುಧಾರಣೆಗೆ ದಲಿತ ಪ್ಯಾಂಥರ್‌ ಆಗ್ರಹ

Date:

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ನುರಿತ ಶಿಕ್ಷಕರಿದ್ದರೂ ಗುಣಮಟ್ಟದ ಶಿಕ್ಷಣ ಸಿಗದೇ ಹಾಜರಾತಿ ಕುಂಠಿತವಾಗಲು ಕಾರಣಗಳೇನು ಎಂಬುದನ್ನು ಪರಿಶೀಲನೆ ನಡೆಸಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ಪದಾಧಿಕಾರಿಗಳು ಒತ್ತಾಯಿಸಿದರು.

- Advertisement -

ಭಾರತೀಯ ದಲಿತ ಪ್ಯಾಂಥರ್ ವತಿಯಿಂದ ಬೀದರ್‌ ಜಿಲ್ಲೆ ಹುಮನಾಬಾದ್ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಂಖಾಂತರ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಜಂಟಿ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

“ಸರ್ಕಾರಿ ಶಾಲೆಗಳನ್ನು ಇತ್ತೀವೆಗೆ ಮುಚ್ಚುವ ಪರಿಸ್ಥಿತಿ ಉದ್ಭವವಾಗಿದೆ. ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯದ ಕಾರಣ ಪೋಷಕರು ನಿರುತ್ಸಾಹ ತೋರುತ್ತಿದ್ದಾರೆ. ಶಾಲೆಯಲ್ಲಿ ನುರಿತ ಶಿಕ್ಷಕರಿದ್ದರೂ ನಿರೀಕ್ಷಿತ ಪ್ರವೇಶ ಸಂಖ್ಯೆ ಇಲ್ಲ. ಆದರೆ, ಖಾಸಗಿ ಶಾಲೆಯಲ್ಲಿ ನುರಿತ ಶಿಕ್ಷಕರಿಲ್ಲದೆ ಇದ್ದರೂ ದಿನೇ ದಿನೇ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಮೂಲ ಕಾರಣ ಏನೆಂಬುದನ್ನು ಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದರು.

“ಸರ್ಕಾರಿ ಶಾಲೆಗಳಲ್ಲಿ ಪಿಠೋಪಕರಣ, ಆಟೋಪಕರಣ, ಕಂಪ್ಯೂಟರ್, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಮಕ್ಕಳಿಗೆ ಆಸಕ್ತಿ ತುಂಬಬೇಕು. ಮುಚ್ಚುವ ಹಂತದಲ್ಲಿರುವ ಶಾಲೆಗಳಿಗೆ ಹೆಚ್ಚಿನ ಗಮನಹರಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ್ಗೆ ಕಡಿವಾಣ ಹಾಕಿ ಪೋಷಕರಿಗೆ ಶುಲ್ಕ ಹೊರೆಯಾಗದಂತೆ ಆದೇಶ ಹೊರಡಿಸಬೇಕು” ಎಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಒತ್ತಾಯಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಬಳಕೆಯಾಗದೇ ಪಾಳುಬಿದ್ದಿದೆ ಸಂತಪೂರ ಬಸ್ ನಿಲ್ದಾಣ

ಈ ಸಂದರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್ ಹುಮನಾಬಾದ್ ತಾಲೂಕು ಅಧ್ಯಕ್ಷ ಗಣಪತಿ ಅಷ್ಟೂರೆ,
ಚಿಟಗುಪ್ಪಾ ತಾಲೂಕಾ ಅಧ್ಯಕ್ಷ ಶಿವಕುಮಾರ್ ಸಾಗರ, ಜಿಲ್ಲಾ ಅಧ್ಯಕ್ಷ ಶಿವಾನಂದ ಕಟ್ಟಿಮನಿ ಸೇರಿದಂತೆ ಪದಾಧಿಕಾರಿಗಳಾದ ವೈಜಿನಾಥ ಸಿಂಧೆ, ಸುನೀಲ್ ಕುಮಾರ್ ಬೋಲಾ, ಅನಂತ ಮಾಳಗೆ, ಶ್ರೀಕಾಂತ್ ಜಮಗಿ, ಸುರೇಶ್ ಪಾಂಡೆ, ರಘುವೀರ್ ಹಿರೋಳೆ, ಶಿವರಾಜ್ ಸೂರ್ಯವಂಶಿ ಅಪ್ಪು ಕಟ್ಟಿಮನಿ, ಸಿದ್ಧಾರ್ಥ್ ಜಾನವೀರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ಔರಾದ್‌ | ಸಾಲದ ಹೊರೆ : ಬಾವಿಗೆ ಹಾರಿ ರೈತ ಆತ್ಮಹತ್ಯೆ

ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...