ಬೀದರ್‌ | ಎನ್‌ಎಸ್‌ಎಸ್‌ಕೆ ಆರ್ಥಿಕ ಬಲವರ್ಧನೆಗೆ ಡಿಸಿಸಿ ಬ್ಯಾಂಕ್‌ ಸಹಕಾರ ಅಗತ್ಯ

Date:

Advertisements

ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕು ಎಂದು ಭಾರತೀಯ ಕಿಸಾನ್‌ ಸಂಘ ಆಗ್ರಹಿಸಿದೆ.

“ಜಿಲ್ಲೆಯ ಡಿಸಿಸಿ ಬ್ಯಾಂಕ್  ದಿವಂಗತ ವೀರಶೆಟ್ಟಿ ಕುಶನೂರ ಅವರು ಪ್ರಾರಂಭಿಸಿ ನಂತರ ದಿವಂಗತ ಗುರುಪಾದಪ್ಪಾ ನಾಗಮಾರಪಳ್ಳಿರವರ ಅಧ್ಯಕ್ಷತ್ಯೆಯಲ್ಲಿ ಮುನ್ನಡೆದು ಇಡೀ ರಾಜ್ಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿತ್ತು. ಮುಂದೆ ಗುರುಪಾದಪ್ಪಾ ನಾಗಮಾರಪಳ್ಳಿಯವರ ಪುತ್ರ ಉಮಾಕಾಂತ ನಾಗಮಾರಪಳ್ಳಿಯವರ ಅಧ್ಯಕ್ಷತೆ ಅವಧಿಯಲ್ಲಿಯೂ ಬ್ಯಾಂಕ್‌ ಉತ್ತಮ ಸಾಧನೆ ಮಾಡಿದೆ. ಹಲವು ದಶಕಗಳ ಬಳಿಕ ಇದೀಗ ನಡೆದ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಸಹೋದರ ಅಮರ ಖಂಡ್ರೆ ಅವರ ಪೆನಾಲ್ ಜಯ ಸಾಧಿಸಿದ್ದು ಹೊಸ ಬೆಳವಣಿಗೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.

“ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ  ಡಿಸಿಸಿ ಬ್ಯಾಂಕಿನ ನಂಟು ಮೊದಲಿನಿಂದಲೂ ಇದೆ. ಸದ್ಯಕ್ಕೆ ನಾರಂಜಾ ಸಕ್ಕರೆ ಕಾರ್ಖಾನೆ (ಎನ್.ಎಸ್.ಎಸ್.ಕೆ) ಸಾಲದಲ್ಲಿ ಮುಳುಗಿ ಆರ್ಥಿಕ ಸಂಕಷ್ಟದಲ್ಲಿದೆ. ಆದ್ದರಿಂದ ಡಿ.ಸಿ.ಸಿ.ಬ್ಯಾಂಕಿನ ಹೊಸ ಆಡಳಿತ ಮಂಡಳಿ ಮೊದಲಿನಂತೆ ಸಹಕರಿಸಿದರೆ ನಾರಂಜಾ ಸಕ್ಕರೆ ಕಾರ್ಖಾನೆಯ ರೈತರ ಬಾಳು ಹಸನವಾಗುತ್ತದೆ. ಇಲ್ಲವಾದಲ್ಲಿ ಹಳಿಖೇಡ (ಬಿ) ಬಿ.ಎಸ್.ಎಸ್.ಕೆ. ಪರಿಸ್ಥಿತಿ ಉಂಟಾಗುವ  ಲಕ್ಷಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿವೆ. ಈ ಬಗ್ಗೆ ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಯೋಚಿಸಿ ನಾರಂಜಾ ಸಕ್ಕರೆ ಕಾರ್ಖಾನೆ ಆರ್ಥಿಕ ಸುಧಾರಣೆಗೆ ಸಹಕರಿಸಬೇಕೆಂದು” ಕಬ್ಬು ಬೆಳೆಗಾರರ ಪರವಾಗಿ ಭಾರತೀಯ ಕಿಶಾನ್‌ ಸಂಘದ ಪದಾಧಿಕಾರಿಗಳು ಕೋರಿದ್ದಾರೆ.

Advertisements

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಸಹಕಾರ ಖಾತೆಯಲ್ಲಿ ನುರಿತ, ಅನುಭವಿಗಳು. ಹೀಗಾಗಿ ಕಬ್ಬು ಬೆಳೆಗಾರರ ಸಹಾಯ ಹಸ್ತಕ್ಕಾಗಿ ಪುನಃ ಅವರ ಅಧ್ಯಕ್ಷತೆಯಲ್ಲಿಯೇ ಸಹಕಾರ ಸಕ್ಕರೆ ಕಾರ್ಖಾನೆ ಮುನ್ನಡೆಸಬೇಕು. ಇದಕ್ಕೆ ಡಿ.ಸಿ.ಸಿ. ಬ್ಯಾಂಕಿನ ಹೊಸ ಆಡಳಿತ ಮಂಡಳಿಯವರು ಸಹಕಾರ ಕೊಟ್ಟು ಸಕ್ಕರೆ ಕಾರ್ಖಾನೆ ಮುಂದುವರೆಸಿದರೆ ಕಬ್ಬು ಬೆಳೆಗಾರರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿಶ್ವದ ಶೇ.20% ಜನರು ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ

ಜಿಲ್ಲಾ ಭಾರತೀಯ ಕಿಸಾನ್ ಸಂಘದ ಗೌರವಾಧ್ಯಕ್ಷ ವೈಜಿನಾಥ ನೌಬಾದೆ, ಜಿಲ್ಲಾಧ್ಯಕ್ಷ ಪ್ರಭು ಮೂಲಗೆ, ಕಾರ್ಯದರ್ಶಿ ಅಮೀತಕುಮಾರ, ನಿರ್ದೇಶಕ ಬಸವರಾಜ ಪಾಟೀಲ್ ಬೀರಿ (ಬಿ) ಅವರು ಜಂಟಿಯಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X