ಬೀದರ್‌ | ವಿದ್ಯುತ್‌ ಗುತ್ತಿಗೆದಾರರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹ

Date:

Advertisements

ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ.

ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ಗುತ್ತಿಗೆದಾರರ ಸಂಘದ ಕಾರ್ಯಕರ್ತರು ಎಇಇ ಮೂಲಕ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

“ವಿದ್ಯುತ್ ಕಂಪನಿಗಳ ಹಿರಿಯ ಅಧಿಕಾರಿಗಳು ವಿದ್ಯುತ್ ಕಾಮಗಾರಿಗಳನ್ನು ದೊಡ್ಡ-ದೊಡ್ಡ ಏಜೆನ್ಸಿಗಳಿಗೆ ನೀಡುವ ಮೂಲಕ ಇಲ್ಲಿನ ಸ್ಥಳೀಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ದೂರಿದರು.

Advertisements

“ಗುತ್ತಿಗೆದಾರರಿಗೆ ₹5 ಲಕ್ಷದವರೆಗೆ ತುಂಡು ಗುತ್ತಿಗೆ ನೀಡಬೇಕು. ಪೂರ್ಣಗೊಂಡ ಎಲ್ಲ ಕಾಮಗಾರಿಗಳ ಬಿಲ್ ಕೂಡಲೇ ಪಾವತಿಸಬೇಕು. ಮೀಟರ್ ಔಟ್‌ಲೆಟ್‌ಗಳಲ್ಲಿ ಸರಿಯಾದ ಸಮಯಕ್ಕೆ ವಿದ್ಯುತ್ ಮಾಪಕಗಳು ದೊರೆಯದ ಕಾರಣ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರಿಗೆ ತುಂಬಾ ತೊಂದರೆಯಾಗಿದೆ. ಕಾರಣ ವಿದ್ಯುತ್ ಮಾಪಕಗಳನ್ನು ಸರಿಯಾದ ಸಮಯಕ್ಕೆ ವಿತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕುಟುಂಬದ ಆರ್ಥಿಕ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು: ಅನಿತಾ ಡಿಸೋಜಾ

ಈ ಸಂದರ್ಭದಲ್ಲಿ ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮುರಳಿ ಪೊದ್ದಾರ್, ಪ್ರಮುಖರಾದ ಶೈಲೇಶ ಚಳಕಾಪೂರೆ, ರಾಹೀಲ್ ಪಾಶಾ, ದತ್ತು ಪಾಟೀಲ್, ರಾಜು ರಾಠೋಡ್, ಸಿದ್ದು, ವಿಲಾಸ ರಾಠೋಡ್, ಸೋಮನಾಥ ಟೋಕರೆ, ಶರಣಕುಮಾರ ಭೋರಾಳೆ, ಪ್ರಕಾಶ್, ವಿಜಯಕುಮಾರ ಕಣಜಿ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X