ಬೀದರ್ | ಹಾಲು ಶುದ್ಧೀಕರಣ ಘಟಕದ ತ್ಯಾಜ್ಯ ವಿಲೇವಾರಿಗೆ ಸ್ಥಳೀಯರ ಆಗ್ರಹ

Date:

Advertisements

ಕಮಲನಗರ ತಾಲೂಕಿನ ಠಾಣಾ ಕುಶನೂರ ಗ್ರಾಮದಲ್ಲಿರುವ ಹಾಲು ಶುದ್ಧೀಕರಣ ಘಟಕ (ಕೆಎಂಎಫ್)ದಿಂದ ಹೊರಸೂಸುವ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿಲ್ಲ. ಪರಿಣಾಮ ಸುತ್ತಲಿನ ನಿವಾಸಿಗಳಿಗೆ ಅನೈರ್ಮಲ್ಯ ಕಾಡುತ್ತಿದೆ. ಕೂಡಲೇ ಕ್ರಮ ಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಬೀದರ್ ಜಿಲ್ಲೆಯ ಔರಾದ ಹಾಗೂ ಕಮಲನಗರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಸಂಗ್ರಹವಾದ ಹಾಲು ಠಾಣಾ ಕುಶನೂರ ಗ್ರಾಮದ ಕೆಎಂಎಫ್ ಶುದ್ಧೀಕರಣ ಘಟಕದಲ್ಲಿ ಶೇಖರಣೆಯಾಗುತ್ತವೆ. ಈ ಶುದ್ಧೀಕರಣ ಘಟಕ ಗ್ರಾಮದಲ್ಲಿ ಅಂಚಿನಲ್ಲೇ ಇದ್ದು, ಘಟಕದ ತ್ಯಾಜ್ಯ ನೀರನ್ನು ರಸ್ತೆ ಪಕ್ಕದ ಚರಂಡಿಗಳಿಗೆ ಹರಿಸಲಾಗುತ್ತಿದೆ. ಇದರಿಂದ ಸುತ್ತಲಿನ ನಿವಾಸಿಗಳಿಗೆ, ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗ್ಗೆ ಕಳೆದ ಜನವರಿಯಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಕೇಳಿದ್ದೆವು. ನಮ್ಮ ಮನವಿಗೆ ಸ್ಪಂದಿಸಿದ ಪಿಡಿಒ ಕೆಎಂಎಫ್ ಶುದ್ಧೀಕರಣ ಘಟಕಕ್ಕೆ ನೋಟೀಸ್ ನೀಡಿದ್ದಾರೆ. ಆದರೆ, ಕೆಎಂಎಫ್‌ ಯಾವುದೇ ಪ್ರತಿಕ್ರಿಯೆ ನೀಡದೆ, ತ್ಯಾಜ್ಯವನ್ನು ಚರಂಡಿಗೆ ಹರಿಸುತ್ತಿದೆ ಎಂದು ಆರೋಪಿಸಿದ್ದಾರೆ.

Advertisements

ಕೂಡಲೇ ತ್ಯಾಜ್ಯ ನೀರು ಬರದಂತೆ ತಡೆಯಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳಾದ ರವೀಂದ್ರ ಕಾಶಿನಾಥ್, ವೀರಭದ್ರ ಬಿರಾದಾರ, ಸಂತೋಷ್ ಜೀರ್ಗೆ, ಸುನಿಲ್ ವಾಘಮಾರೆ, ಜೈರಾಜ ಖೇಮಶೆಟ್ಟಿ, ಮಾರುತಿ ಜೀರ್ಗೇ, ಬಾಬುರಾವ್ ಜೀರ್ಗೆ, ಸಂತೋಷ ಸ್ವಾಮಿ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X