ಬೀದರ್ | ಎಲ್ಲ ಸಂಸ್ಥೆಗಳಲ್ಲೂ ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಆಗ್ರಹ

Date:

ಸರ್ಕಾರದ ಅಧೀನದಲ್ಲಿರುವ ಕೈಗಾರಿಕೆ, ಶಿಕ್ಷಣ, ಸಾರಿಗೆ, ವ್ಯಾಪಾರ ಕಚೇರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಸೂಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆಗ್ರಹಿಸಿದ್ದಾರೆ.

- Advertisement -

ಬೀದರ್ ಜಿಲ್ಲೆಯ ಔರಾದ ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ ಕರವೇ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಪಂಚಾಯತಿ ಸಿಇಒಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ. “ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಆದರೆ, ಗಡಿ ತಾಲೂಕು ಔರಾದದಲ್ಲಿ ಅನ್ಯಭಾಷೆಯ ಪ್ರಭಾವ ದಟ್ಟವಾಗಿದ್ದು, ಕನ್ನಡ ಕುಂಠಿತವಾಗುತ್ತಿದೆ. ಕೇವಲ ಅಂಗಡಿ ಮುಂಗಟ್ಟುಗಳ ನಾಮಫಲಕ ಬದಲಾದರೆ ಕನ್ನಡ ಅನುಷ್ಠಾನಕ್ಕೆ ಬರುವುದಿಲ್ಲ. ತಾಲೂಕಿನ ಶಾಲಾ ಕಾಲೇಜು, ವಾಹನ, ಬ್ಯಾಂಕ್, ವಾಣಿಜ್ಯ, ನ್ಯಾಯಾಂಗ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಕನ್ನಡದಲ್ಲಿ ನಾಮ ಫಲಕಗಳನ್ನು ಅಳವಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಕನ್ನಡ ಸಾಹಿತ್ಯ ಪರಿಷತ್ತು, ಜನಪದ ಸಾಹಿತ್ಯ ಪರಿಷತ್ತು ಮತ್ತು ಇತರ ಕನ್ನಡ ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು ಕನ್ನಡ ಅನುಷ್ಠಾನಕ್ಕೆ ತರಲು ಶ್ರಮಿಸಬೇಕು. ವಾರದೊಳಗೆ ಕನ್ನಡ ನಾಮ ಫಲಕಗಳನ್ನು ಹಾಕದಿದ್ದಲ್ಲಿ, ಜುಲೈ 18ರಂದು ಅನ್ಯ ಭಾಷೆಯ ಫಲಕಗಳಿಗೆ ಮಸಿ ಬಳಿಯಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಅನೀಲ ದೇವಕತ್ತೆ, ಗೌರವಾಧ್ಯಕ್ಷ ಬಸವರಾಜ ಶೇಟಕರ, ನಗರ ಘಟಕದ ಅಧ್ಯಕ್ಷ ಬಾಲಾಜಿ ದಾಮಾ, ಮಹೇಶ ಹಳೆಂಬುರೆ, ಪಪ್ಪು ಹಕ್ಕೆ, ಅರ್ಜುನ್ ಭಂಗೆ ,ಧರ್ಮ ಕಾಂಬಳೆ ,ದೀಲಿಪ ಹಕ್ಕೆ ,ಮೇಹಬುಬ ಭಾಗವಾನ, ಯೋವನ ಕಾಂಬಳೆ, ಕಪೀಲ ಚೌವಾಣ, ಮುನ್ನಾ ಹಕ್ಕೆ ,ಕಪೀಲ‌ ಹತ್ನೋಳೆ, ಸಂಗಮೇಶ ಮೇತ್ರೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...