ಬೀದರ್‌ | ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ : ಸಚಿವ ರಹೀಂ ಖಾನ್

Date:

Advertisements

ರೈತರಿಗೆ ಸರ್ಕಾರದಿಂದ ಸಿಗುವ ಬಿತ್ತನೆ ಬೀಜ, ಕೃಷಿಭಾಗ್ಯ ಯೋಜನೆ, ಸಾವಯವ ಕೃಷಿ ಹಾಗೂ ಇತರೆ ಯೋಜನೆಗಳ ಲಾಭವನ್ನು ಸಕಾಲದಲ್ಲಿ ರೈತರಿಗೆ ವಿತರಿಸುವಂತೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಬೀದರ ಸಂಯುಕ್ತಾಶ್ರಯದಲ್ಲಿ ಚಾಂಬೋಳಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿತ್ತನೆ ಬೀಜ ವಿತರಣೆ ಹಾಗೂ ಬೀಜ ಉಪಚಾರ ಹಾಗೂ ಕೀಟನಾಶಕ ಸುರಕ್ಷಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೀದರ ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ. ಪಾಸ್ತಾವಿಕ ಮಾತನಾಡಿ, ʼಸೋಯಾ ಮತ್ತು ಇತರೆ ಬೀಜಗಳು ದಾಸ್ತಾನ ಮಾಡಿರುವ 29 ಬೀಜ ವಿತರಣಾ ಕೇಂದ್ರಗಳ ಬಗ್ಗೆ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾಹಿತಿ ನೀಡಿ ದಿನಾಂಕವಾರು ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆʼ ಎಂದರು.

Advertisements
WhatsApp Image 2025 05 27 at 5.50.40 PM 1
ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ರೈತರಿಗೆ ಬಿತ್ತನೆ ಬೀಜ ವಿತರಿಸಿದರು.

ಸಕಾಲದಲ್ಲಿ ಮಳೆಯಾಗಿರುವುದರಿಂದ ಉದ್ದು, ಹೆಸರು ಮತ್ತು ಮಿಶ್ರ ಬೆಳೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಗೂ ಡಿಎಪಿ ಬದಲಿಗೆ ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಸಲಹೆ ನೀಡಿದರು.

ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿ ಡಾ.ಮಲ್ಲಿಕಾರ್ಜುನ ಲಿಂಗದಳ್ಳಿ ಅವರು ಸಮಗ್ರ ಕೃಷಿ ಪದ್ಧತಿ ಹಾಗೂ ಬಿತ್ತನೆ ಬೀಜ ಉಪಚಾರದ ಕುರಿತು ತರಬೇತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಬೀದರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಎಲ್.ಜಾಧವ, ಚಾಂಬೋಳ್ ಗ್ರಾಮ ಪಂಚಾಯತ ಅಧ್ಯಕ್ಷೆ ಸುರೇಖಾ ಅರ್ಜುನ ಕೋಳಿ, ಉಪಾಧ್ಯಕ್ಷ ದೌಲತರಾವ, ಚಾಂಬೋಳ್ ಪಿಕೆಪಿಎಸ್ ಅಧ್ಯಕ್ಷ ಸುನಿಲ್ ಪಾಟೀಲ್, ಜಿಲ್ಲಾ ಕೃಷಿಕ ಸಮಾಜದ ಸದಸ್ಯ ಸಂಜು ಪಾಟೀಲ್ ಕನ್ನಳ್ಳಿ ಸೇರಿದಂತೆ ಪ್ರಮುಖರಾದ ರಾಮರಾವ ಪಾಟೀಲ್, ನಾಗೇಂದ್ರ ಪಾಟೀಲ್, ಬಂಡೆಪ್ಪಾ ಜ್ಯಾಂತೆ, ಧನರಾಜ ಪಾಟೀಲ್, ಉಮೇಶ ಮೊಟ್ಟೆ, ಚಂದ್ರಕಾಂತ ಹಿಪ್ಪಳಗಾಂವ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X