ಬೀದರ್‌ | ಜಿಲ್ಲಾ ಬೆಳೆ ಸಮೀಕ್ಷೆದಾರರ ಸಂಘ ಉದ್ಘಾಟನೆ

Date:

Advertisements

ಬೀದರ್‌ ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಮಂಗಳವಾರ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼರೈತರಿಗೆ ಬೆಳೆ ವಿಮೆ ಸೇರಿದಂತೆ ಅನೇಕ ಸೌಲಭ್ಯಗಳು ದಕ್ಕಬೇಕಾದರೆ ಬೆಳೆ ಸಮೀಕ್ಷೆ ಕಾರ್ಯ ಪ್ರಮುಖ ಪಾತ್ರವಹಿಸುತ್ತದೆ. ಬಿಸಿಲು, ಮಳೆ ಎನ್ನದೆ ರೈತರ ಜಮೀನುಗಳಿಗೆ ತೆರಳಿ ಬೆಳೆ ಸಮೀಕ್ಷೆ ನಡೆಸುವ ಗಣತಿದಾರರ ತುಂಬಾ ಮುಖ್ಯವಾಗಿದೆ. ಸರ್ಕಾರ, ಕೃಷಿ ಇಲಾಖೆ ಅವರ ಬೇಡಿಕೆಗಳಿಗೆ ಸ್ಪಂದಿಸಿ ವಿಶೇಷ ಸೌಲಭ್ಯ ಒದಗಿಸಬೇಕುʼ ಎಂದು ತಿಳಿಸಿದರು.

ʼಬೆಳೆ ಸಮೀಕ್ಷೆದಾರರು ಜಮೀನಿಗೆ ಬಂದು ಸಮೀಕ್ಷೆ ನಡೆಸುವ ವೇಳೆ ರೈತರು ಸಹಕರಿಸಬೇಕು. ರೈತರ ಬೆಳೆದ ಬೆಳೆಗೆ ಖರೀದಿ ನಿಗದಿಯಾಗುವುದು ಸಮೀಕ್ಷೆ ಆಧಾರದಲ್ಲಿ, ಹೀಗಾಗಿ ರೈತರ ಹಿತದೃಷ್ಟಿಯಿಂದ ನಿಖರವಾಗಿ ಸಮೀಕ್ಷೆ ನಡೆಸಿ ಮಾಹಿತಿ ನೀಡಬೇಕುʼ ಎಂದು ಸಲಹೆ ನೀಡಿದರು.

Advertisements

ಭಾಲ್ಕಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಮಾತನಾಡಿ, ʼಬೀದರ್‌ ಜಿಲ್ಲೆಯ ಬೆಳೆ ಸಮೀಕ್ಷೆದಾರರು ಅತ್ಯಂತ ಪ್ರಾಮಾಣಿಕತೆಯಿಂದ ಗಣತಿ ಕಾರ್ಯ ನಡೆಸುತ್ತಿದ್ದಾರೆ. ಕೃಷಿ ಇಲಾಖೆಯಿಂದ ಈಗಾಗಲೇ ಕೆಲವು ಬೇಡಿಕೆಗಳು ಈಡೇರಿಸಲಾಗಿದೆ. ಸಮೀಕ್ಷೆ ಕಾರ್ಯದೊಂದಿಗೆ ಕೃಷಿ ಇಲಾಖೆಯ ಯೋಜನೆಗಳ ಕುರಿತು ರೈತರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಿದೆʼ ಎಂದರು.

ಜಿಲ್ಲಾ ಬೆಳೆ ಸಮೀಕ್ಷೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ ಕಾಂಬಳೆ ಮಾತನಾಡಿ, ʼರೈತರ ಹಿತದೃಷ್ಟಿ, ಕಾಳಜಿಯಿಂದ ಅತ್ಯಂತ ಕಡಿಮೆ ಗೌರವಧನದಲ್ಲಿ ಸಮೀಕ್ಷೆ ಕಾರ್ಯ ನಡೆಸುತ್ತಿದ್ದೇವೆ. ಈ ಕಾರ್ಯದಿಂದ ನಮಗೆ ತೃಪ್ತಿಯಿದೆ. ಮುಂದಿನ ದಿನಗಳಲ್ಲಿ ಸಂಘಟನೆ ಬಲಪಡಿಸಿ ವಿವಿಧ ಬೇಡಿಕೆಗಳಿಗೆ ಹೋರಾಟ ರೂಪಿಸಲಾಗುವುದುʼ ಎಂದರು.

WhatsApp Image 2025 07 22 at 7.16.33 PM
ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರಿಗೆ ಗೌರವಿಸಲಾಯಿತು.

ರಾಜ್ಯ ಬೆಳೆ ಸಮೀಕ್ಷೆದಾರರ ಸಂಘದ ಸಂಸ್ಥಾಪಕ, ಪ್ರಧಾನ ಕಾರ್ಯದರ್ಶಿ ರಾಜು ಡಿಫರೆಂಟ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಮೋಹನ್‌ ಮಾನೆ ಗಾದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಇದನ್ನೂ ಓದಿ : ಶ್ರಾವಣ ಮಾಸ | ಜು.24 ರಿಂದ ಬೀದರ್ ಜಿಲ್ಲೆಯ 22 ಕಡೆಗಳಲ್ಲಿ ಪ್ರವಚನ : ಬಸವಲಿಂಗ ಪಟ್ಟದ್ದೇವರು

ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಸಂಘಟನಾ ಕಾರ್ಯದರ್ಶಿ ಸುಂದರ್ ಹಲಗೆ, ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ ಮೂಲಗೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ರೈತ ಸಂಘದ ನಾಗಶೆಟ್ಟಿ ನಂಜವಾಡೆ, ವೀರಾರೆಡ್ಡಿ ಪಾಟೀಲ್, ಹೋರಾಟಗಾರ ಕೊಂಡಿಬಾರಾವ್‌ ಹಾಗೂ ಬೆಳೆ ಸಮೀಕ್ಷೆದಾರರ ಸಂಘದ ಭಾಲ್ಕಿ ತಾಲೂಕಾಧ್ಯಕ್ಷ ಏಕನಾಥ್ ಮೇತ್ರೆ, ಹುಮನಾಬಾದ್‌ ತಾಲೂಕಾಧ್ಯಕ್ಷ ಭೀಮಶಾ ಮೇಲಕೇಡಿ, ಬೀದರ್‌ ತಾಲೂಕಾಧ್ಯಕ್ಷ ಶಿವಕುಮಾರ್ ಶಿವಗೊಂಡ್, ಚಿಟಗುಪ್ಪಾ ತಾಲೂಕಾಧ್ಯಕ್ಷ ವಿನೋದ್ ಉಡಬಾಳ್, ಬಸವಕಲ್ಯಾಣ ತಾಲೂಕಾಧ್ಯಕ್ಷ ಶಂಕರಲಿಂಗ, ಹುಲಸೂರ ತಾಲೂಕಾಧ್ಯಕ್ಷ ಪರಮೇಶ್ವರ ಕಾದೆಪೂರ, ಔರಾದ್‌ ತಾಲೂಕಿನ ಜನಾರ್ಧನ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ರೈತ ಸಂಘದ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X