ಬೀದರ್‌ | ಜೀ ಕನ್ನಡ ಮಹಾನಟಿ ಸ್ಪರ್ಧೆಗೆ ದಿವ್ಯಾಂಜಲಿ ಆಯ್ಕೆ : ಗುರುಬಸವ ಪಟ್ಟದ್ದೇವರು ಶುಭ ಹಾರೈಕೆ

Date:

Advertisements

ಕನ್ನಡದ ಜೀ ಕನ್ನಡ ವಾಹಿನಿಯ ಮಹಾನಟಿ ಸೀಜನ್ 2ರ ಸ್ಪರ್ಧೆಗೆ ಆಯ್ಕೆಯಾಗಿರುವ ಬೀದರ್‌ನ ದಿವ್ಯಾಂಜಲಿ ಅವರನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿ, ಆಶೀರ್ವದಿಸಿದರು.

ಬೆಂಗಳೂರಿನಲ್ಲಿ ದಿವ್ಯಾಂಜಲಿ ಅವರನ್ನು ಪೂಜ್ಯರು ಬುಧವಾರ ಭೇಟಿಯಾಗಿ ಗಡಿ ಜಿಲ್ಲೆ ಬೀದರ್‌ನಲ್ಲಿ ಅದ್ಭುತ ಪ್ರತಿಭೆಗಳಿದ್ದಾರೆ ಎನ್ನುವುದಕ್ಕೆ ದಿವ್ಯಾಂಜಲಿ ಸಾಕ್ಷಿಯಾಗಿದ್ದಾರೆ. ಉತ್ತಮ ಅವಕಾಶ, ಸೂಕ್ತ ವೇದಿಕೆ ಲಭಿಸಿದರೆ ಗಡಿಭಾಗದ ಮಕ್ಕಳಲ್ಲಿ ಹುದಗಿರುವ ಸೂಪ್ತ ಪ್ರತಿಭೆ ಹೊರ ಬರಲಿದೆʼ ಎಂದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಬಡವರು, ದೀನ ದುರ್ಬಲ, ನಿರಾಶ್ರಿತರ ಬೆಳೆವಣಿಗೆಗೆ ಬದುಕು ಮೀಸಲಿಟ್ಟಿದ್ದಾರೆ. ಅನಾಥ ಮಕ್ಕಳ ಸೇವೆಯಲ್ಲಿ ಬಸವಣ್ಣನವರನ್ನು ಕಾಣುತ್ತಿದ್ದಾರೆ. ಹೆತ್ತವರಿಗೆ ಬೇಡವಾದ ಮಕ್ಕಳನ್ನು ಕರೆತಂದು ಅನ್ನ, ಅಕ್ಷರ, ಆಶ್ರಯ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಅದರಲ್ಲಿ ದಿವ್ಯಾಂಜಲಿ ಕೂಡ ಒಬ್ಬರಾಗಿದ್ದು, ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಆಶೀರ್ವಾದಿಂದ ಉತ್ತಮ ಶಿಕ್ಷಣ, ಸಂಸ್ಕಾರ ಪಡೆದಿರುವ ದಿವ್ಯಾಂಜಲಿ ಕಲೆಯನ್ನು ಆರಾಧಿಸುತ್ತಿದ್ದಾಳೆʼ ಎಂದರು.

Advertisements

ದಿವ್ಯಾಂಜಲಿಗೆ ಮಹಾನಟಿ ಸ್ಪರ್ಧೆಯಲ್ಲಿ ಅವಕಾಶ ಲಭಿಸಿದ್ದು ಅದರ ಸದುಪಯೋಗ ಪಡೆದು ಉತ್ತಮವಾಗಿ ಅಭಿನಯಿಸಿ ಸ್ಪರ್ಧೆಯಲ್ಲಿ  ಮುಂದಿನ ಎಲ್ಲ ಸುತ್ತುಗಳಲ್ಲಿ ಗೆಲುವು ಸಾಧಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಲಿʼ ಎಂದು ಹಾರೈಸಿದರು.

ಇದನ್ನೂ ಓದಿ : ಕೊಪ್ಪಳ ಜಿಲ್ಲಾಧಿಕಾರಿ ವರ್ಗಾವಣೆ : ಸುರೇಶ ಹಿಟ್ನಾಳ್‌ ನೂತನ ಡಿಸಿ; ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ನಳಿನಿ ಅತುಲ್‌ ನೇಮಕ

ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ, ಗಿರೀಶ ಕುಲಕರ್ಣಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X