ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್‌ ಚಿಂತನೆ ಮೈಗೂಡಿಸಿಕೊಳ್ಳಿ : ಶ್ಯಾಮಸುಂದರ ಖಾನಾಪುರ್

Date:

Advertisements

ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳು ಕೊನೆಗೊಳ್ಳಬಾರದು. ಬಾಬಾ ಸಾಹೇಬರ ಸಂದೇಶಗಳನ್ನು ಎದೆಯೊಳಗೆ ಇಳಿಸಿಕೊಂಡು ಸಮಾಜದಲ್ಲಿ ನಿರಂತರವಾಗಿ ಬಿತ್ತಬೇಕಾಗಿದೆ. ಒಡೆದು ಹೋಗುತ್ತಿರುವ ಎಲ್ಲಾ ಜಾತಿ ಸಮುದಾಯಗಳನ್ನು ಒಗ್ಗೂಡಿಸುವುದು ಇಂದು ಅಗತ್ಯವಾಗಿದೆ ಎಂದು ಚಿಂತಕ ಶ್ಯಾಮಸುಂದರ್‌ ಖಾನಾಪುರ್‌ ಹೇಳಿದರು.

ಔರಾದ್‌ ತಾಲ್ಲೂಕಿನ ಲಿಂಗದಳ್ಳಿ(ಕೆ) ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ಸಮಿತಿಯಿಂದ ಆಯೋಜಿಸಿದ ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ʼಯಾವುದೇ ಖಡ್ಗದಿಂದ ಆಗದೇ ಇರುವ ಮಹತ್ವದ ಕಾರ್ಯವನ್ನು ಬಾಬಾ ಸಾಹೇಬರು ಪೆನ್ನು, ಪುಸ್ತಕದಿಂದ ಮಾಡಿ ತೋರಿಸಿದ್ದಾರೆ. ಭಾರತ ದೇಶದ ಕೋಟ್ಯಂತರ ಜನರಿಗೆ ಪೆನ್ನು, ಪುಸ್ತಕ ಮೂಲಕ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಹಾಗೂ ಭಾತ್ರತ್ವವನ್ನು ನೀಡಿದ್ದಾರೆ. ಅಂಬೇಡ್ಕರ್‌ ಅವರನ್ನು ಆರಾಧನೆಗಷ್ಟೇ ಸೀಮಿತಗೊಳಿಸದೆ ಅವರ ವಿದ್ವತ್ತು, ಪ್ರೀತಿ, ಕರುಣೆ ನಾವೆಲ್ಲರೂ ಮೈಗೂಡಿಸಿಕೊಂಡರೆ ಮಾತ್ರ ಪ್ರಬುದ್ಧ ಭಾರತ ನಿರ್ಮಾಣವಾಗಲು ಸಾಧ್ಯʼ ಎಂದು ತಿಳಿಸಿದರು.

Advertisements

ಮುಖಂಡ ಭೀಮಶೇನರಾವ್‌ ಸಿಂಧೆ ಮಾತನಾಡಿ, ʼಬುದ್ಧ, ಬಸವ, ಅಂಬೇಡ್ಕರ್‌ ಅವರ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಮೌಲ್ಯಗಳು ಸಮಾಜಕ್ಕೆ ಮಾದರಿಯಾಗಿವೆ. ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನ ರಚಿಸಿದ ಬಾಬಾ ಸಾಹೇಬರು ಹುಟ್ಟಿದ ದಿನವೇ ದೇಶಕ್ಕೆ ಹೊಸ ಬೆಳಕು ಬಂದಿದೆ. ಅವರ ಆದರ್ಶಗಳನ್ನು ನಿಜ ಜೀವನದಲ್ಲಿ ಆಚರಣೆಗೆ ತರಬೇಕುʼ ಎಂದು ತಿಳಿಸಿದರು.

ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳಕರ್‌ ಮಾತನಾಡಿ, ʼಸಮಾಜದಲ್ಲಿ ಬೇರೂರಿದ ಕೆಟ್ಟ ಸಂಪ್ರದಾಯವನ್ನು ಕಿತ್ತೊಗೆದು ಮಕ್ಕಳಿಗೆ ಮೌಲ್ಯ ಶಿಕ್ಷಣ ನೀಡಿ ಅಂಬೇಡ್ಕರ್‌ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ದೇಶದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಭಗವಾನ್‌ ಬುದ್ಧರ ಧಮ್ಮ ಮಾರ್ಗದಲ್ಲಿ ಸಾಗಬೇಕು. ಜಾತಿ ವ್ಯವಸ್ಥೆ ಹೋಗಲಾಡಿಸಲು ಬಾಬಾ ಸಾಹೇಬರು ಬದುಕಿನುದ್ದಕ್ಕೂ ಹೋರಾಟ ನಡೆಸಿದರು. ಮೀಸಲಾತಿ ಹೆಸರಿನಲ್ಲಿ ಯಾರೊಬ್ಬರೂ ಬಾಬಾ ಸಾಹೇಬರ ಧಮ್ಮ ಮತ್ತು ಸಿದ್ಧಾಂತಕ್ಕೆ ದ್ರೋಹ ಬಗೆಯಬಾರದುʼ ಎಂದರು.

WhatsApp Image 2025 04 12 at 2.20.22 PM
ಲಿಂಗದಳ್ಳಿ(ಕೆ) ಗ್ರಾಮದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪ್ರತಿಮೆ ಅನಾವರಣಗೊಳಿಸಲಾಯಿತು.

ನ್ಯಾಯವಾದಿ ಶಿವರುದ್ರ ಕಾಂಬಳೆ, ದಲಿತ ಯುನಿಟಿ ಮ್ಯೂಮೆಂಟ್‌ ಸಂಸ್ಥಾಪಕ ವಿನೋದ ರತ್ನಾಕರ್‌, ಬಸವರಾಜ ಬಿರಾದರ್ ಮಾತನಾಡಿದರು. ಯುವ ಹೋರಾಟಗಾರ ರಾಹುಲ್‌ ಖಂದಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಿಪ್ಪಳಗಾವ್‌ ಬುದ್ಧ ವಿಹಾರದ ಭಂತೆ ಬೋಧಿರತ್ನಾ, ಯಲ್ಲಾಲಿಂಗ ಮಠದ ಶಂಕ್ರಯ್ಯಾ ಸ್ವಾಮಿ ದಿವ್ಯ ಸಾನಿಧ್ಯ ವಹಿಸಿದ್ದರು. ಶರಣಪ್ಪ ವೀರಪ್ಪ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂವಿಧಾನ ಮೇಲೆ ಬೆಳಕು ಚೆಲ್ಲುವ ʼಭಾಗ್ಯವಿದಾತʼ ಕೃತಿ : ಧನರಾಜ ತುಡಮೆ

ಬೀದರ್‌ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ, ಬಿಎಸ್ಪಿ ಜಿಲ್ಲಾಧ್ಯಕ್ಷ ಕಪಿಲ್‌ ಗೋಡಭೋಲೆ, ಲಿಂಗದಳ್ಳಿ ಗ್ರಾ.ಪಂ.ಸದಸ್ಯ ಶ್ರೀಶೈಲ ಪಾಟೀಲ್‌, ದಸಂಸ ಮುಖಂಡರಾದ ಸುಭಾಷ ಲಾಧಾ, ಗಣಪತರಾವ್‌ ವಾಸುದೇವ ಪ್ರಮುಖರಾದ ಸುಧಾಕರ ಕೊಳ್ಳೂರ್‌,‌ ಮಾಣಿಕ ಹೆಗಡೆ, ಪಂಡಿತ, ಮಾಸ್ಟರ್‌, ಬಾಬುರಾವ್‌ ಮಾನೆ, ಪವನ ಮಿಠಾರೆ, ಫೀರ್ದೊಶ್ ಖಾನ್‌ ಪಟೇಲ್‌, ಪಂಡರಿ ಕಸ್ತೂರೆ, ಸಚಿನ್‌ ಗಿರಿ, ಪ್ರಕಾಶ ರಾವಣ, ಸಂತೋಷ ಸಿಂಧೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X