ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

Date:

Advertisements

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.

ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು ಸಂಜೆ ರೈತ ರಾಜಕುಮಾರ ನಾಗಪ್ಪಾ ಮಟ್ಟೆ ಅವರು ಕೆಲಸ ಮಾಡುತ್ತಿರುವ ಜಮೀನಿಗೆ ತೆರಳಿ ಸಾಲದ ಕಂತಿನ ಹಣ ಯಾಕೆ ಕಟ್ಟಿಲ್ಲ ಎಂದು ಅವಾಚ್ಯ ಶಬ್ದಗಳಿಂದ‌ ನಿಂದಿಸಿ ರಾಜಕುಮಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ರೈತ ರಾಜಕುಮಾರ್ ನಾಗಪ್ಪ ಮಟ್ಟೆ ಅವರ ಪತ್ನಿ ವಿಜಯಲಕ್ಷ್ಮಿಅವರು ಭಾಲ್ಕಿ ಪಟ್ಟಣದಲ್ಲಿರುವ ಸಿದ್ಧಶ್ರೀ ಬ್ಯಾಂಕ್‌ನಲ್ಲಿ ₹35 ಸಾವಿರ ಸಾಲ ಪಡೆದಿದ್ದರು. ಬ್ಯಾಂಕ್‌ ನಿಯಮದಂತೆ ಪ್ರತಿ ವಾರ ಸಾಲದ ಕಂತು ಮರುಪಾವತಿಸಿದ್ದಾರೆ. ಆದರೆ ಉಳಿದಿರುವ ಬಾಕಿ ₹9,180 ಹಣ ಯಾಕೆ ಕಟ್ಟಿಲ್ಲವೆಂದು ಪ್ರಶ್ನಿಸಿ ಎಂದು ಬ್ಯಾಂಕ್‌ ಸಿಬ್ಬಂದಿ ರಾಜಕುಮಾರ್‌ ಅವರಿಗೆ ಬಡಿಗೆಯಿಂದ ಹೊಡೆದು ಗಾಯಗೊಳಿಸಿದ್ದರು.

Advertisements

ಹಲ್ಲೆಗೊಳಗಾದ ರೈತ ರಾಜಕುಮಾರ್‌ ಮಟ್ಟೆ ಅವರನ್ನು ಕೂಡಲೇ ಹುಲಸೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಚಿಕಿತ್ಸೆ ಮುಂದುವರೆದಿದೆ.

ʼಸಾಲದ ಕಂತು ಕಟ್ಟುವುದು ಯಾವುದೂ ಬಾಕಿ ಇಲ್ಲ. ಅಂದು ಮುಂಜಾನೆ ಕಟ್ಟಬೇಕಾದ ಸಾಲದ ಕಂತು ಕಟ್ಟಿಲ್ಲವೆಂದು ಸಂಜೆ ಜಮೀನಿಗೆ ಬಂದು ನನ್ನ ತಲೆ, ಬೆನ್ನಿನ ಮೇಲೆ ಹೊಡೆದು ಗುಪ್ತಗಾಯ ಮಾಡಿದ್ದಾರೆ. ಈ ಹಿಂದೆ ಕೂಡ ಒಮ್ಮೆ ಸಾಲದ ಮರುಪಾವತಿ ವಿಚಾರಕ್ಕೆ ಬ್ಯಾಂಕ್‌ ಸಿಬ್ಬಂದಿಯೊಂದಿಗೆ ಜಗಳವಾಗಿತ್ತುʼ ಎಂದು ಹಲ್ಲೆಗೊಳಗಾದ ರಾಜಕುಮಾರ್‌ ಮಟ್ಟೆ ಅವರು ʼಈದಿನ.ಕಾಮ್‌ʼ ಜೊತೆ ಮಾತನಾಡಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ : ಅರಣ್ಯ ಪಾಲಕ ದಸ್ತಗಿರಿಸಾಬ ಅಮಾನತುಈ ಸುದ್ದಿ ಓದಿದ್ದೀರಾ?

ರೈತ ರಾಜಕುಮಾರ್‌ ಮಟ್ಟೆ ಅವರು ನೀಡಿದ ದೂರಿನ ಮೇರೆಗೆ ಭಾಲ್ಕಿ ಸಿದ್ಧಶ್ರೀ ಬ್ಯಾಂಕ್‌ ಸಿಬ್ಬಂದಿಗಳಾದ ಸಂಗಮೇಶ ಚಮಕೋಡೆ, ಸಂಗಮೇಶ ಬಿರಾದರ್‌, ಕಿರಣ ಪಾಟೀಲ್‌ ಹಾಗೂ ಸುನೀಲ್‌ ಎಂಬುವವರ ಮೇಲೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X