ಬೀದರ್ | ಹಿಂದೂ-ಮುಸ್ಲಿಮರ ನಡುವೆ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶ ಉತ್ಸವ

Date:

Advertisements

ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮಾತಾ ಮಾಣಿಕೇಶ್ವರಿ ಬಡಾವಣೆಯ ಹಿಂದೂ ಮಹಾ ಗಣೇಶ ಮಂಡಳಿಯ ವತಿಯಿಂದ ಗಣೇಶ್ ಉತ್ಸವ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆ ತಾಲೂಕು ವೈದ್ಯಾಧಿಕಾರಿ ಡಾ. ಗಾಯತ್ರಿ ಅವರು ಉದ್ಘಾಟಿಸಿದರು. ಸಿಪಿಐ ರಘುವೀರ್ ಸಿಂಗ್ ಠಾಕೂರ್, ಪಿ ಎಸ ಐ ವಸಿಮ್ ಪಟೇಲ್, ಪಟ್ಟಣ ಪಂಚಾಯತ್ ಸದಸ್ಯ ದಯಾನಂದ ಘುಳೆ, ಕಾಂಗ್ರೆಸ್ ಯುವ ಮುಖಂಡ ಸುಧಾಕರ್ ಕೊಳ್ಳುರ, ಗಣೇಶ್ ಮಂಡಳಿ ಅಧ್ಯಕ್ಷ ಸಂತೋಷ್ ದ್ಯಾಡೆ, ಯುವ ಕಾಂಗ್ರೇಸ್ ಮುಖಂಡ ಶಿವಶಂಕರ್ ನಿಸ್ಪತೆ. ಮುಂತಾದವರು ಉಪಸ್ಥಿತರಿದ್ದರು.

WhatsApp Image 2024 09 14 at 12.29.38 PM 1

ಈ ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಸೇರಿ ರಕ್ತದಾನ ಮಾಡಿ ಭಾವೈಕ್ಯತೆ, ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ. ಅದೇ ರೀತಿಯಾಗಿ ಸತತವಾಗಿ ಏಳು ದಿನಗಳ ಕಾಲ ಪೂಜಾ ಕಾರ್ಯಕ್ರಮ ಸೇರಿದಂತೆ ಮಹಾ ಪ್ರಸಾದ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಸಹೋದರರು ಭಾಗಿಯಾದರು.

Advertisements

ಬಡಾವಣೆಯ ಮೋಸಿನ್ ಪಟೇಲ ಅವರು ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಿದರು. ಶಾಂತಿ ಸೌಹಾರ್ದತೆಯ ಗಣೇಶ ಉತ್ಸವ ಜರುಗುತ್ತಿರುವುದು ವಿಶೇಷವಾಗಿದೆ.

ರಕ್ತದಾನ ಮಾಡಿದ ಮುಸ್ಲಿಂ-ಹಿಂದೂ ಬಾಂಧವರು

ಫೈಜುಲ್ಲಾ ಖಾನ್, ಮೋಸಿನ್ ಪಟೇಲ್, ಆಕಾಶ ನಾಗೂರೆ, ಸಂತೋಷ ಸ್ವಾಮಿ, ಶಿವಬಸವ ಪಾಟೀಲ, ನಾಗರಾಜ ಭಾಲ್ಕೆ, ವಿಶಾಲ ಗಜರೆ, ಶ್ರೀಕಾಂತ ನಿರ್ಮಳೆ, ಬಸವಲಿಂಗ ಯನಗುಂದೆ, ಸೇರಿದಂತೆ ಸುಮಾರು 50 ಜನ ಯುವಕರು ರಕ್ತದಾನ ತಮ್ಮ ಭಕ್ತಿ ಸಮರ್ಪಣೆ ಗಣೇಶನಿಗೆ ಅರ್ಪಿಸಿದರು.

ಪ್ರತಿ ವರ್ಷ ನಡೆಯುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಹಾಗೂ ವಿನೂತನ ಕಾರ್ಯಕ್ರಮಕ್ಕೆ ನಮ್ಮ ಓಣಿಯ ನಿವಾಸಿಗಳು ಸಾಕ್ಷಿಯಾಗಿದ್ದಾರೆ. ಧರ್ಮ-ಜಾತಿ ಎನ್ನದೇ ಎಲ್ಲರೂ ಒಗ್ಗೂಡಿ ಇದೆ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆ ಇರುತ್ತದೆ ಎಂದು ಹಿಂದೂ ಮಹಾ ಗಣೇಶ್ ಮಂಡಳಿ ಅಧ್ಯಕ್ಷರಾದ ಸಂತೋಷ ದ್ಯಾಡೆ ಅವರು ತಿಳಿಸಿದರು.

WhatsApp Image 2024 09 14 at 12.29.38 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X