ಬೀದರ್ | ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ; ಅಧಿಕಾರಿಗಳ ವಿರುದ್ಧ ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿ

Date:

Advertisements

ಸರ್ಕಾರ ಬಡ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಡ ಮಕ್ಕಳು ಸೌಲಭ್ಯಗಳಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ ಶೈಲೇಂದ್ರ ಬೆಲ್ದಾಳೆ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲಿನ ಸ್ಥಿತಿಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

“ಗ್ರಾಮೀಣ ಭಾಗದಲ್ಲಿ ಬಡ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ, ಡಿಜಿಟಲ್ ಲೈಬ್ರರಿ, ಡಿಜಿಟಲ್ ಕ್ಲಾಸ್ ಸೌಲಭ್ಯ ಸರ್ಕಾರ ಕಲ್ಪಿಸಿದೆ. ಆದರೆ, ಇಲ್ಲಿನ ಶಿಕ್ಷಣ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಯಾವುದೇ ಸೌಲಭ್ಯ ಒದಗಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಮಾದರಿ ಪ್ರಾಥಮಿಕ ಶಾಲೆ ಪರಿಸ್ಥಿತಿ ಕಂಡು ದಿಗ್ಭ್ರಮೆಯಾಗಿದೆ. ಶಾಲೆ ಕೊಠಡಿಗಳು ಇದ್ದರು ವಿದ್ಯಾರ್ಥಿಗಳು ಶಾಲೆ ಹೊರಗಡೆ ಕುಳಿತು ಪಾಠ ಕೇಳುತ್ತಿದ್ದಾರೆ ಅಂದರೆ, ಅರ್ಥವೇನು?” ಎಂದು ಕಿಡಿಕಾರಿದ್ದಾರೆ.

Advertisements

“ಬಡವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ದೊರೆತರೆ ಮಾತ್ರ ಮಕ್ಕಳು ಶಾಲೆಗೆ ಬರುತ್ತಾರೆ. ಉತ್ತಮ ಸೌಲಭ್ಯ ನೀಡುವುದು ಅಧಿಕಾರಿಗಳ ಕರ್ತವ್ಯ. ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಸೌಲಭ್ಯಗಳು ದೊರೆಯುತ್ತಿಲ್ಲ. ನೂತನ ಕಟ್ಟಡ ಎಲ್ಲೆಂದರಲ್ಲಿ ಸೊರುತ್ತಿದೆ, ಶೌಚಾಲಯ ವ್ಯವಸ್ಥೆ ಉತ್ತಮವಾಗಿಲ್ಲ ಕಟ್ಟಡ ನಿರ್ಮಾಣ ಮಾಡಿದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಜೈಲು ಸೇರಿದ ಬಿಇಒ

“ಶಾಲೆಯ ವಿದ್ಯಾರ್ಥಿಗಳ ಅಭ್ಯಾಸದ ಕುರಿತು ಮತ್ತು ವಿಧ್ಯಾರ್ಥಿಗಳ ಸಮಸ್ಯೆ ಕುರಿತು ಮಾಹಿತಿ ಪಡೆದರು ಬಳಿಕ ಡಿಡಿಪಿಐ, ಬಿಇಒ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಶಾಲೆಯಲ್ಲಿರುವ ವ್ಯವಸ್ಥೆ ಕುರಿತು ತಿಳಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆ ಸರಿಪಡಿಸಿ ಮಾಹಿತಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ್ ಮಾಶೆಟ್ಟಿ, ಕುಶಲರಾವ ಯಾಬಾ, ನಾಗಭುಷಣ ಕಮಠಾಣಾ, ಬಸವರಾಜ ಕ್ಯಾಸಾ, ಉಮೇಶ ಯಾಬಾ, ವಿಜಯಕುಮಾರ ಬಕ್ಕಚೌಡಿ, ಉದಯ ಮಹಾರಾಜ, ಅಶೋಕ ಪಾಟೀಲ್, ಚಂದ್ರಯ್ಯಾ ಸ್ವಾಮಿ, ವಿಜಯಕುಮಾರ ಸ್ವಾಮಿ, ಪ್ರಶಾಂತ ಕಮಠಾಣಾ, ಸಿದ್ದಾರೂಢ ಭಾಲ್ಕೆ ಸೇರಿದಂತೆ ಕಮಠಾಣ ಗ್ರಾಮಸ್ಥರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X