ಬೀದರ್‌ | ಗುಣಮಟ್ಟದ ಶಿಕ್ಷಣ ಕಲ್ಪಿಸಿದರೆ ಮಾತ್ರ ಸರಕಾರಿ ಶಾಲೆ ಉಳಿಯುತ್ತವೆ : ಸಂಸದ ಸಾಗರ ಖಂಡ್ರೆ

Date:

Advertisements

ಸರಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಕಾಳಜಿ ವಹಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಪ್ರಯತ್ನಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯುತ್ತವೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಭಾಲ್ಕಿ ಪಟ್ಟಣದ ಬಸವ ನಗರ ಬಡಾವಣೆಯ ಶಶಿಕಾಂತ ಎಸ್.ಎಲ್.ಪಾಟೀಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 27.55 ಲಕ್ಷ ಅನುದಾನದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ʼಮಕ್ಕಳ ಕಲಿಕೆಗೆ ಬೇಕಿರುವ ಉತ್ತಮ ಶಾಲಾ ಕಟ್ಟಡಗಳು, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಎಲ್ಲ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. ಆದರೆ, ಖಾಸಗಿ ಶಾಲೆಗಳಿಗೆ ಹೊಲಿಸಿದರೇ ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟ ಕುಸಿಯುತ್ತಿದೆʼ ಎಂದು ಆತಂಕ ವ್ಯಕ್ತಪಡಿಸಿದರು.

Advertisements

ಮಕ್ಕಳ ಕಲಿಕೆಗೆ ಪೂರಕವಾಗಿ ಹೊಸದಾಗಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿಕೊಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ಸೌಜನ್ಯ ಹತ್ಯೆ & ನಿಗೂಢ ಸಾವುಗಳ ನ್ಯಾಯಕ್ಕಾಗಿ ಒತ್ತಾಯಿಸಿ ಆನ್‌ಲೈನ್‌ ಸಹಿ ಸಂಗ್ರಹ ಅಭಿಯಾನ

ಲೋಕೋಪಯೋಗಿ ಇಲಾಖೆಯ ಎಇಇ ಅಲ್ತಾಫ್, ಪ್ರಭಾರಿ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ, ಕಚೇರಿ ವ್ಯವಸ್ಥಾಪಕ ಶಿವಕುಮಾರ ಫುಲಾರಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಜಕುಮಾರ ಬಿರಾದಾರ್, ಮುಖ್ಯಗುರು ರಾಜಶೇಖರ, ಶಿಕ್ಷಣ ಹಣಮಶೆಟ್ಟಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X