ಬೀದರ್‌ | ಕಾನೂನು ಬಾಹಿರ ಚಟುವಟಿಕೆ : ಮಾರ್ಚ್ ತಿಂಗಳಲ್ಲಿ 189 ಪ್ರಕರಣ; 431 ಆರೋಪಿಗಳ ಬಂಧನ

Date:

Advertisements

ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಬ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ.

ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಗಳ ವಿವರ :

Advertisements

22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ, 11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ, 49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ, ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ, ಹಾಗೂ 97 ಅಬಕಾರಿ ಪ್ರಕರಣಗಳಲ್ಲಿ 105 ಆರೋಪಿಗಳನ್ನು ಬಂಧಿಸಿ ₹1.95 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ʼಆರೋಪಿಗಳು ಪದೇ ಪದೇ ಕಾನೂನು ವಿರುದ್ದ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಲಾಗುವುದುʼ ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X