ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

Date:

Advertisements

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌ ಪಡೆಯಲು ಹಣ ಪಡೆದರೆ ಪಡಿತರ ಅಂಗಡಿಗಳ ಮಾನ್ಯತೆಯನ್ನು ರದ್ದುಪಡಿಸುವ ಸಾಧ್ಯತೆ ಇದೆ.

ಪಡಿತರ ಮಾರಾಟದಲ್ಲಿ ಅಕ್ರಮ ಕಂಡುಬಂದಿರುವ ಕುರಿತು ಬೀದರ್‌ ಜಿಲ್ಲಾಡಳಿತ ಪಡಿತರ ಅಂಗಡಿಗಳ ಮೇಲೆ ದಾಳಿ ಮಾಡಿದ್ದು, ಮಾನ್ಯತೆ ರದ್ದು ಮಾಡಿದೆ. ಅಕ್ರಮದಲ್ಲಿ ನಿರತರಾದವರ ಮೇಲೆ ಚಾಟಿ ಬೀಸಿದ್ದು, ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿದೆ.

“ಸರ್ಕಾರದ ನಿಯಮ ಉಲ್ಲಂಘಿಸಿದ ಜಿಲ್ಲೆಯ 22 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ ಅವುಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

Advertisements

“ಬೀದರ್‌ ನಗರದ 11 ನ್ಯಾಯಬೆಲೆ ಅಂಗಡಿ, ಬೀದರ್‌ ಗ್ರಾಮೀಣ ಭಾಗದ 4, ಹುಮನಾಬಾದ್‌ ತಾಲೂಕಿನ 4, ಭಾಲ್ಕಿ ತಾಲೂಕಿನ 2 ಅಂಗಡಿಗಳು ಸೇರಿದಂತೆ ಒಟ್ಟು 22 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿ ಅವುಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ಪಡಿತರ ಚೀಟಿದಾರರಿಗೆ ನಿಗದಿಗಿಂತ ಕಡಿಮೆ ಪ್ರಮಾಣದಲ್ಲಿ ಅಕ್ಕಿ ವಿತರಣೆ ಮಾಡಿರುವುದು, ಪಡಿತರ ಚೀಟಿದಾರರಿಂದ ಬಯೋಮೆಟ್ರಿಕ್‌ ಪಡೆಯಲು ತಲಾ 10 ರೂ. ಪಡೆದಿರುವುದು ಮತ್ತು ಬಿಲ್‌ ಪುಸ್ತಕ, ಮಾರಾಟ ಪುಸ್ತಕ, ದಾಸ್ತಾನು ಫಲಕ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

“ಅಕ್ರಮ ಎಸಗಿರುವ 22 ನ್ಯಾಯ ಬೆಲೆ ಅಂಗಡಿಗಳಿಂದ 53.54 ಲಕ್ಷ ರೂ.ಮೌಲ್ಯದ 1793.46 ಕ್ವಿಂಟಲ್‌ ಅಕ್ಕಿ ಜಪ್ತಿ ಮಾಡಿದ್ದು, 32 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜಿಲ್ಲೆಯ 6 ಕಡೆ ದಾಳಿ ನಡೆಸಿ ಅನಧಿಕೃತವಾಗಿ ಸಂಗ್ರಹಿಸಿದ್ದ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿದ್ದ 228 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ ಅದಾಲತ್‌ಗೆ ಗ್ರಾಹಕರ ಆಗ್ರಹ

“ಬೀದರ್‌ ಜಿಲ್ಲೆಯ ಹಲವು ಭಾಗದಲ್ಲಿ ಪಡಿತರದಾರರೊಂದಿಗೆ ಸರಿಯಾಗಿ ನಡೆದುಕೊಳ್ಳದೇ ಅಕ್ರಮದಲ್ಲಿ ಭಾಗಿಯಾಗಿರುವ ದೂರುಗಳು ಕೇಳಿ ಬರುತ್ತಲೇ ಇವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರಿಗೆ ದೂರು ನೀಡಿದರೆ ಅವರು ಎಚ್ಚರಿಕೆ ನೀಡುತ್ತಿದ್ದರು. ಈಗ ಬಿಗಿ ಕ್ರಮ ಕೈಗೊಂಡಿರುವುದು ಸೂಕ್ತವಾಗಿದೆ” ಎಂದು ಜಿಲ್ಲೆಯ ಹಲವು ಪಡಿತರಚೀಟಿ ಹೊಂದಿರುವ ಗ್ರಾಹಕರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

“ಆಹಾರ ಇಲಾಖೆ ಅವ್ಯವಸ್ಥೆ, ಪಡಿತರ ಮೋಸ, ಜನರಿಗೆ ಆಗುತ್ತಿರುವ ಅಡಚಣೆ ತಪ್ಪಿಸಲು ಹೀಗೆ ನಿಯಮಿತವಾಗಿ ಕ್ರಮ ಆಗಬೇಕು. ಈ ಮೊದಲು ಇದ್ದ ಹಾಗೆ ತಿಂಗಳಿಗೆ ಒಂದು ಬಾರಿಯಾದರೂ ʼಆಹಾರ ಅದಾಲತ್‌ʼ ಆಯೋಜಿಸಬೇಕು” ಎಂದು ಗ್ರಾಹಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X