ಬೀದರ್‌ | ಕಲಿಕೋತ್ಸವ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ : ಗಣಪತಿ

Date:

Advertisements

ಮಕ್ಕಳಲ್ಲಿ ಅಡಗಿರುವ ಅಗಾಧವಾದ ಪ್ರತಿಭೆ ಗುರುತಿಸಲು ಕಲಿಕೋತ್ಸವ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಚಾಂಗಲೇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಗಣಪತಿ ಹೇಳಿದರು.

ಬೀದರ್‌ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಗ್ರಾಮ ಪಂಚಾಯತ್ ಚಾಂಗಲೇರಾ ಇವರ ಸಹಯೋಗದಲ್ಲಿ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ ಶಾಲಾ ವಾರ್ಷಿಕೋತ್ಸವ, ಕಲಿಕೋತ್ಸವ ಹಾಗೂ ಇಕೋ ಕ್ಲಬ್ ಉದ್ಘಾಟನೆ ಹಾಗೂ 8ನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ʼಮಕ್ಕಳ ಪ್ರತಿಭೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಅನಾವರಣಗೊಳಿಸಿ ಶಿಕ್ಷಕರು ಮಕ್ಕಳ ವಿಭಿನ್ನ ಪ್ರತಿಭೆಯನ್ನು ಕಣ್ಣಾರೆ ನೋಡುವಂತೆ ಮಾಡಿದ್ದಾರೆ. ಮಕ್ಕಳ ಕಲಿಕೆ ಮತ್ತು ಅವರ ಪ್ರತಿಭೆಯನ್ನು ನೋಡಿ ಸಂತೋಷವಾಗಿದೆʼ ಎಂದು ಶ್ಲಾಘಿಸಿದರು.

Advertisements

ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ ವಾಲಿ ಮಾತನಾಡಿ, ʼಮಕ್ಕಳು ಸಿದ್ಧಪಡಿಸಿದ ವಿವಿಧ ಮಾದರಿ ಚಟುವಟಿಕೆ, ಕ್ರಿಯಾಶೀಲತೆ, ದೇಶಭಕ್ತಿ ನೋಡಿ ಹೆಮ್ಮೆ ಎನಿಸಿದೆ. ಇನ್ನೂ ಹೆಚ್ಚಿನ ಜ್ಞಾನವೃದ್ಧಿ ಗಳಿಸಿ ಗ್ರಾಮಕ್ಕೆ ಕೀರ್ತಿ ತರಬೇಕುʼ ಎಂದು ಹಾರೈಸಿದರು.

WhatsApp Image 2025 03 19 at 7.48.33 PM
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಶಾಲೆಯ ಮುಖ್ಯಗುರು ಧರ್ಮಪ್ರಕಾಶ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರಾದ ಅಶೋಕ, ಶ್ರೀಮತಿ ಯಶೋಧಾ, ಕಂಟೆಪ್ಪಾ ಚಾಂಗಲೇರಾ, ಸೊಸೈಟಿ ಅಧ್ಯಕ್ಷರಾದ ಪರಮೇಶ್ವರ ಸ್ವಾಮಿ, ಎಪಿಎಂಸಿ ಸದಸ್ಯ ದೇವಿಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಶೇಖರ ಉಪ್ಪಿನ್, ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ ಜಮಾದಾರ, ಖಜಾಂಚಿ ರಮೇಶ ಕ್ಯಾತಾ, ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷೆ ಪ್ರೇಮಿಲಾಬಾಯಿ ರೆಡ್ಡಿ, ನಿರ್ದೇಶಕ ಮೋಜೆಷ್, ಸಿಆರ್‌ಪಿ ಶಿವಕುಮಾರ ರಾಠೋಡ್, ಮಲ್ಲಯ್ಯ ಸ್ವಾಮಿ, ಮುಖ್ಯಗುರುಗಳ ಸಂಘದ ಅಧ್ಯಕ್ಷ ಮಾರುತಿ ಜಟಗೊಂಡ, ನಿರ್ದೇಶಕ ಶ್ರೀಮತಿ ಕಸ್ತೂರಿ ಉಪಸ್ಥಿತರಿದ್ದರು.

ಚಾಂಗಲೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ವಿವಿಧ ಸರಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಫಾರೆಲ್, ವಿಜಯಕುಮಾರ, ಜ್ಯೋತಿ, ರಾಜಶೇಖರ ಮಳ್ಳಿ, ಶಿವಕುಮಾರ ಸಾಲಿ, ನಾರಾಯಣ ಮಡಿವಾಳ, ಸಾವಿತ್ರಿಬಾಯಿ, ಸುಧಾರಾಣಿ ಶರ್ಮಾ, ನಿರಂಜನ್, ಶಿವಕುಮಾರ ತೊಂಟೆ, ಗೌತಮ್ ರಾಹುಲ್, ಪ್ರಕಾಶ ರಾಹುಲ್, ಶಿವರಾಜ್, ಸುಜಾತಾ, ರಮೇಶ ರೆಡ್ಡಿ, ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್ | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರು ಪಾರು

ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಶಿಕ್ಷಕಿ ಜೈಶ್ರೀ ಸ್ವಾಗತ ಗೀತೆ ನಡೆಸಿಕೊಟ್ಟರು. ರಾಜಪ್ಪ ಸಾಗರ್ ಸ್ವಾಗತಿಸಿದರು. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರುಗಳು ವರದಿ ವಾಚನ ಮಾಡಿದರು. ಎಂ.ಎಸ್.ಮನೋಹರ ನಿರೂಪಿಸಿದರು. ಶಿವಕುಮಾರ ಹೂಗಾರ್ ವಂದಿಸಿದರು. ಶಿಕ್ಷಕರಾದ ಮಸ್ತಾನ್, ಶಿಕ್ಷಕಿಯರಾದ ಗಾಯತ್ರಿ, ಪ್ರತಿಭಾ, ಭುವನೇಶ್ವರಿ, ರೇಣುಕಾ, ಕವಿತಾ ಸೇರಿದಂತೆ ವಿದ್ಯಾರ್ಥಿ, ಸಿಬ್ಬಂದಿ ಹಾಗೂ ಪಾಲಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X