ಬೀದರ್ | ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್‌ಗೆ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿ

Date:

Advertisements

ಬೀದರ್‌ನ ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್ (ಅಲಿಬಾಬಾ) ಅವರು ಪ್ರಸಕ್ತ ಸಾಲಿನ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕೆಎಂಡಿಸಿ ಸಭಾಂಗಣದಲ್ಲಿ ನಾಳೆ (ಫೆ.27) ನಡೆಯಲಿರುವ ಸಮಾರಂಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ನಾಲ್ಕು ದಶಕಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಕಾಜಿ ಅಲಿಯೊದ್ದಿನ್ ಅವರು ಜಿಲ್ಲೆಯ ಹಿರಿಯ ಪತ್ರಕರ್ತರಲ್ಲಿ ಒಬ್ಬರಾಗಿದ್ದಾರೆ. ‘ಅಲಿಬಾಬಾ’ ಎಂದೇ ಚಿರಪರಿಚಿತರಾದ ಅವರು ಸರಳತೆ, ನೇರ ನಡೆ- ನುಡಿಗೆ ಹೆಸರಾಗಿದ್ದಾರೆ.

Advertisements

ತಮ್ಮ ಹರಿತವಾದ ಲೇಖನಿ ಮೂಲಕ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಟ್ಟಿದ್ದಾರೆ. ಶೋಷಿತರು, ನಿರ್ಗತಿಕರು, ಅಸಹಾಯಕರ ಪರ ಗಟ್ಟಿ ಧ್ವನಿಯಾಗಿದ್ದಾರೆ. ಯುವ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ಪ್ರಶಸ್ತಿ, ಬೀದರ್ ಜಿಲ್ಲಾ ಆಡಳಿತ, ವಿವಿಧ ಸಂಘ ಸಂಸ್ಥೆಗಳ ಹಲವು ಪ್ರಶಸ್ತಿ-ಸಮ್ಮಾನಗಳಿಗೆ ಭಾಜನರಾಗಿದ್ದಾರೆ.

ಬೀದರ್ ಉತ್ಸವದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದ್ದ ಪ್ರಖ್ಯಾತ ಪತ್ರಿಕಾ ಛಾಯಾಗ್ರಾಹಕ ಗುಲಾಂ ಮುಂತಾಕ ಅವರ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಏರ್ಪಡಿಸಿದ ಹಿರಿಮೆಯೂ ಇವರದ್ದಾಗಿದೆ. ಕಾಜಿ ಅಲಿಯೋದ್ದೀನ್ ಅವರು ಬೀದರ್ ಕೀ ಆವಾಜ್ ಹಿಂದಿ ದಿನ ಪತ್ರಿಕೆ ಹಾಗೂ ಸುರ್ಖ್ ಝಮೀನ್ ಉರ್ದು ದಿನಪತ್ರಿಕೆಯ ಉಪ ಸಂಪಾದಕರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X