ಬೀದರ್‌ | ಮುಖ್ಯ ಶಿಕ್ಷಕ ಶಾಲೆಗೆ ಗೈರು; ಶಿಸ್ತು ಕ್ರಮಕ್ಕೆ ಕೆಆರ್‌ಎಸ್‌ ಆಗ್ರಹ

Date:

ಎಕಲಾರ (ತಾಂಡ)ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿರಂತರವಾಗಿ ಗೈರು ಹಾಜರಾಗುತ್ತಿದ್ದಾರೆ. ಸರ್ಕಾರದ ಆದೇಶವನ್ನು ಗಾಳಿಗೆ ತೂರಿ, ಮಕ್ಕಳ ಭವಿಷ್ಯದ ಜೊತೆ ಆಟ ಆಡುತ್ತಿದ್ದಾರೆ. ಅವರನ್ನು ಕೂಡಲೇ ಕರ್ತವ್ಯದಿಂದ ಅಮಾನತು ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಒತ್ತಾಯಿಸಿದೆ.

- Advertisement -

ಬೀದರ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಕೆಆರ್‌ಎಸ್‌ ಕಾರ್ಯಕರ್ತರು, “ಜಿಲ್ಲೆಯ ಔರಾದ್ ತಾಲೂಕಿನ ಎಕಲಾರ (ತಾಂಡ)ದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲಿ ಒಬ್ಬರು ಮುಖ್ಯ ಶಿಕ್ಷಕ, ಇನ್ನೊಬ್ಬರು ಸಹ ಶಿಕ್ಷಕಿಯಾಗಿದ್ದಾರೆ. ಮುಖ್ಯಗುರುಗಳೇ ನಿಗದಿತ ಸಮಯಕ್ಕೆ ಶಾಲೆಗೆ ಬರುವುದಿಲ್ಲ. ಒಂದು ವೇಳೆ ಶಾಲೆಗೆ ಬಂದರೂ, ಕೇವಲ ಹಾಜರಾತಿಗೆ ಸಹಿ ಹಾಕಿ ಮತ್ತೆ ವಾಪಸಾಗುತ್ತಾರೆ ಎಂಬುದಾಗಿ ಗ್ರಾಮಸ್ಥರು ನಮ್ಮ ಗಮನಕ್ಕೆ ತಂದಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸದರಿ ಶಾಲೆಗೆ ಭೇಟಿ ನೀಡಿದಾಗ ಮುಖ್ಯ ಶಿಕ್ಷಕ ಶಾಲೆಯಲ್ಲಿ ಇಲ್ಲದಿರುವುದನ್ನು ಕಂಡು ಔರಾದ್‌ನ ಕ್ಷೇತ್ರ ಶಿಕ್ಷಣಾಧಿಕಾರಗಳ ಗಮನಕ್ಕೆ ತರಲಾಗಿತ್ತು. ಸಿಆರ್‌ಸಿ ಅವರು ಮುಖ್ಯ ಶಿಕ್ಷಕನನ್ನು ಸ್ಥಳಕ್ಕೆ ಕರೆಸಿ, ಎಲ್ಲರ ಸಮ್ಮುಖದಲ್ಲಿ ಹಾಜರಾತಿ, ಪುಸ್ತಕ ಪರಿಶೀಲನೆ ನಡೆಸಿದ್ದಾರೆ. ಫೆಬ್ರವರಿ ತಿಂಗಳಲ್ಲಿ 28 ದಿನಳಿದ್ದು, ಇಲ್ಲಿನ 29ನೇ ತಾರಿಖಿನಲ್ಲಿಯೂ ಸಹಿ ಮಾಡಿದ್ದಾರೆ. ಇದರಿಂದ ಮುಖ್ಯ ಶಿಕ್ಷಕ ವಾರಕ್ಕೊ, ತಿಂಗಳಿಗೋ ಒಮ್ಮೆ ಶಾಲೆಗೆ ಬಂದು ಸಿಹಿ ಮಾಡಿ ಹೋಗುತ್ತಾರೆ. ಪ್ರತಿ ದಿನ ಶಾಲೆಗೆ ಬರುವುದಿಲ್ಲ ಎಂಬುವದು ಮೇಲ್ನೋಟಕ್ಕೆ ಎದ್ದು ಕಾಣುತ್ತಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸರ್ಕಾರ, ಕೃಷಿ ವಿಜ್ಞಾನಿಗಳು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ; ರೈತ ಸಂಘ ಕಿಡಿ

“ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಬೇಕಾದ ಶಿಕ್ಷಕರೇ ಹೀಗೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಮಕ್ಕಳ ಶೈಕ್ಷಣಿಕ ಬದುಕು ರೂಪುಗೊಳ್ಳಲು ಹೇಗೆ ಸಾಧ್ಯ. ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು” ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ, ಉಪಾಧ್ಯಕ್ಷ ಶಿವರಾಜ ಶ್ರೀಮಂಗಲೆ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಮೇತ್ರೆ, ಹಣಮಂತ ಮಟ್ಟೆ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...