ಬೀದರ್ | ಸರ್ಕಾರಿ ಕಚೇರಿಗಳ ಅವ್ಯವಸ್ಥೆ ಸುಧಾರಣೆಗೆ ಕೆಆರ್‌ಎಸ್ ಆಗ್ರಹ

Date:

Advertisements

ಬೀದರ್ ಜಿಲ್ಲೆಯ ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸುಧಾರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿಯ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಿದರು.

‘ರಾಜ್ಯದ ನಾನಾ ಭಾಗಗಳಲ್ಲಿ 500ಕ್ಕೂ ಹೆಚ್ಚು ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಮತ್ತು ಲೋಪದೋಷಗಳನ್ನು ಸರಿಪಡಿಸಲು ಕ್ರಮ ಜರುಗಿಸುವಂತೆ ತಿಳಿಸಲಾಗಿದೆ. ಈ ಬಗ್ಗೆ ಸಮಗ್ರ ಕ್ರಮ ಕೈಗೊಳ್ಳಲು ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯೂ ವ್ಯವಸ್ಥೆ ಸುಧಾರಣೆಯಾಗಿಲ್ಲ ಸಕಾಲಕ್ಕೆ ಜನರ ಕೆಲಸ-ಕಾರ್ಯಗಳು ಆಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements
WhatsApp Image 2024 08 08 at 10.33.13 AM

‘ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ಉತ್ತಮ ಸೇವೆ ಸಿಗುವಂತಹ ಪರಿಸ್ಥಿತಿ ನಿರ್ಮಾಣ ಮಾಡಲು ಅಭಿಯಾನ ನಿರಂತರ ನಡೆಸಲಾಗುತ್ತಿದೆ. 15 ದಿನಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಮತ್ತು ದಕ್ಷ ಆಡಳಿತ ನೀಡಬೇಕು. ಜಿಲ್ಲೆಯ ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸುಧಾರಣೆ ಮಾಡಬೇಕು’ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಜರಂಗ ಪವಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ತುಕಾರಾಮ ಗೌರೆ, ಶಿವರಾಜ ಶ್ರೀಮಂಗಲೆ, ದಯಾನಂದ ಸ್ವಾಮಿ, ಪ್ರಭು ಬಾಮಂದಿ, ಸಂಗಪ್ಪಾ ಬಂಡೆ, ಸಾಯಿನಾಥ ಗನ್ನೆ, ಭೀಮರಾವ ಫತ್ತೆಪೂರೆ, ವಿಠಲರಾವ ಚಟ್ನಾಳಕರ, ಬಾಲಭದ್ರ ದಾಮ , ತಾನಾಜಿ ಜಾಧವ, ರಾಘವೇಂದ್ರ, ಶರಣಬಸಪ್ಪಾ, ಶಿವರಾಜ, ಈರಣ್ಣಾ, ಹಣಮಂತ, ಸಿದ್ದಲಿಂಗ, ಜೈ ಭೀಮ, ರಾಜು, ಅವಿನಾಶ, ಗೌರಿಶ, ಶಿವಾಜಿ, ಮಲ್ಲಿಕಾರ್ಜುನ, ವಿಜಯಕುಮಾರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X