ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

Date:

Advertisements

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ.

ಸತತ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿ ಇರುವ ಹೊಲಗಳಲ್ಲಿ ಮಳೆ ನೀರು ನಿಂತಿದೆ. ಹೆಸರು, ಉದ್ದು, ತೊಗರಿ ಸೇರಿದಂತೆ ಕಬ್ಬು ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಮುಳುಗುತ್ತಿವೆ. ಬಿತ್ತನೆಯಾದ ಕೆಲ ದಿನಗಳ ವೇಳೆ ಮಳೆ ಬಾರದಕ್ಕೆ ರೈತರು ಎದುರು ನೋಡುತ್ತಿದ್ದರು. ಇದೀಗ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಹಚ್ಚಹಸಿರಿನಿಂದ ನಳನಳಿಸುವ ದೃಶ್ಯ ಒಂದು ಕಡೆಯಾದರೆ, ಬೆಳೆ ಹಾನಿಯ ಚಿಂತೆ ಮತ್ತೊಂದೆಡೆ ರೈತರನ್ನು ಕಾಡುತ್ತಿದೆ.

WhatsApp Image 2025 08 17 at 9.54.27 PM
ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಿರ್ಜಾಪುರ (ಟಿ) ಗ್ರಾಮದಲ್ಲಿ ರೈತರ ಹೊಲದಲ್ಲಿ ನೀರು ಸಂಗ್ರಹಗೊಂಡಿರುವುದು.

ಬಿಡುವು ನೀಡದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಸ್ತಬ್ಧಗೊಂಡಿವೆ. ಹೆಸರು ಮತ್ತು ಉದ್ದು ಬೆಳೆಗಳಿಗೆ ಕೀಟಗಳ ಹಾವಳಿ ನಿಯಂತ್ರಣಕ್ಕೆಂದು ಕೀಟನಾಶಕ ಸಿಂಪಡಿಸುವ ಕೆಲಸ ನಿಂತಿದೆ. ಕೆಲವೆಡೆ ಹೆಸರು ಕಟಾವಿಗೆ ಬಂದರೆ, ಇನ್ನೂ ಹಲವು ಕಡೆ ಕಾಯಿಯಾಗಿರುವ ಹಂತದಲ್ಲಿದೆ.

Advertisements

ಭಾರಿ ಮಳೆ ಬರುತ್ತಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊಲಗಳಲ್ಲಿ ತೇವಾಂಶ ಅಧಿಕಗೊಂಡು ಕೆಸರು ಗದ್ದೆಯಾಗಿ ಮಾರ್ಪಟ್ಟಿವೆ. ನದಿ, ಜಲಾಶಯ, ಕೆರೆ, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

ಇದನ್ನೂ ಓದಿ : ಬೀದರ್‌ | ಅಂಗವಿಕಲ ಸಹೋದರಿಯರಿಗೆ ಕೆಎಲ್‌ಇ ಸೊಸೈಟಿಯಿಂದ ʼಸಹಾಯ ಹಸ್ತʼ

‘ಕಾರಂಜಾ ಜಲಾಶಯ ಹರಿವು ಹೆಚ್ಚಾದ ಹಿನ್ನೆಲೆ ನೀರು ಹರಿಸಲಾಗುತ್ತಿದ್ದು, ಇದರಿಂದ ಜೋಳದಾಬಕಾ, ಗೋಧಿ ಹಿಪ್ಪರಗಾ ಸೇರಿದಂತೆ ವಿವಿಧೆಡೆ ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ. ಸರ್ಕಾರ ಶೀಘ್ರ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು’ ಎಂದು ಭಾಲ್ಕಿ ತಾಲೂಕಿನ ರೈತ ಸಿದ್ದು ಜಮಾದರ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X