ಬೀದರ್ | ಸಂತಪೂರ ಪದವಿ ಪೂರ್ವ ಕಾಲೇಜಿನಲ್ಲಿ ‘ಸಾಕ್ಷರತಾ ಜಾಥಾ’ ಕಾರ್ಯಕ್ರಮ

Date:

Advertisements

ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಓಂಪ್ರಕಾಶ್ ದಡ್ಡೆ ಅಭಿಪ್ರಾಯಪಟ್ಟರು.

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಸಾಕ್ಷರತಾ ಜಾಥಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರಾಚೀನ ಕಾಲದಲ್ಲಿ ನಮ್ಮ ದೇಶವು ಜ್ಞಾನ ಮತ್ತು ವಿಜ್ಞಾನದ ಅಧ್ಯಯನದಲ್ಲಿ ಪ್ರವರ್ತಕನಾಗಿದ್ದರಿಂದ ವಿಶ್ವಗುರು ಸ್ಥಾನವನ್ನು ಹೊಂದಿತ್ತು. ಅದನ್ನು ಮತ್ತೆ ಪಡೆಯಲು ಶಿಕ್ಷಣಕ್ಕೆ ಉತ್ತೇಜನ ನೀಡುವುದು ಅಗತ್ಯವಾಗಿದೆ” ಎಂದರು.

ಜಿಲ್ಲಾ ಸಾಕ್ಷರತಾ ಅಧಿಕಾರಿ ಶಿವರಾಜ ಪಾಟೀಲ ಮಾತನಾಡಿ, “ಸಂಪೂರ್ಣ ಸಾಕ್ಷರತೆ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ನಾಗರಿಕನ ಒಳಗೊಳ್ಳುವಿಕೆ ಮುಖ್ಯವಾಗಿರುತ್ತದೆ. ಸಂಪೂರ್ಣ ಸಾಕ್ಷರತೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಸಂಘ ಸಂಸ್ಥೆಗಳ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು” ಎಂದು ಕರೆ ನೀಡಿದರು.

Advertisements

ಪತ್ರಕರ್ತ ಪರಮೇಶ ವಿಳಸಪೂರೆ ಮಾತನಾಡಿ, “ಕಲಿಕೆಗೆ ವಯಸ್ಸಿನ ಮಿತಿ ಇಲ್ಲ. ಯಾವುದೇ ವಯಸ್ಸಿನಲ್ಲಿ ಎಲ್ಲರೂ ಎಲ್ಲರಿಗಾಗಿ ಕಲಿಸಬೇಕು. ಇದರಿಂದ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಬಹುದು, ಜಗತ್ತಿನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯು ಸಾಮಾಜಿಕ ಮತ್ತು ವೈಯಕ್ತಿಕ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಸಾಕ್ಷರತಾ ದಿನದ ಆಚರಣೆಯ ಪ್ರಮುಖ ಉದ್ದೇಶವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ಶಿವರಾಜ ಜುಕಾಲೆ, ತಾಲೂಕು ಸಾಕ್ಷರತಾ ಅಧಿಕಾರಿ ವೆಂಕಟ್ ಕೋಳೆಕರ್, ಶಿವರಾಜ ಮಲ್ಕಾಪುರೆ, ರಮೇಶ್, ಕಲಾವಿದ ದೇವಿದಾಸ ಚಿಮ್ಕೊಡ್, ಬಕ್ಕಪ್ಪಾ ದಂಡಿನ್, ವಿರಶೆಟ್ಟಿ ಹಾಗೂ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X