ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Date:

Advertisements

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಏ.22 ಸೋಮವಾರ ಕೊನೆಯ ದಿನವಾಗಿತ್ತು. ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರಕ್ಕೆ ಸ್ಫರ್ಧಿಸಲು ಒಟ್ಟು 20 ಅಭ್ಯರ್ಥಿಗಳ ನಾಮತ್ರಗಳು ಅಂಗೀಕೃತವಾಗಿದ್ದವು. ಅದರಲ್ಲಿ ಎರಡು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಗೆ ಹಿಂಪಡೆದ ಕಾರಣ ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.

ಕಣದಲ್ಲಿ ಉಳಿದವರು :

Advertisements

ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ನೋಂದಾಯಿತ ಪಕ್ಷದ 8 ಜನ ಅಭ್ಯರ್ಥಿಗಳಾದ ಪುಟರಾಜ್ ಹಣಮಂತ (ಬಿಎಸ್‌ಪಿ) ಭಗವಂತ ಖೂಬಾ (ಬಿಜೆಪಿ), ಸಾಗರ ಈಶ್ವರ ಖಂಡ್ರೆ (ಕಾಂಗ್ರೆಸ್), ಅಂಬಾದಾಸ್ ಸೋಪಾನವರ ಹುಲಸೂರ (ಬಹುಜನ ಭಾರತ ಪಾರ್ಟಿ), ಮಹೇಶ ಗೋರನಾಳಕರ್ (ಆರ್‌ಪಿಐ(ಎ), ಮಹಮ್ಮದ್ ಶಫೀಕ್ ಆರ್ (ಆಲ್ ಇಂಡಿಯಾ ಉಲಮ ಕಾಂಗ್ರೆಸ್), ರಮೇಶ ಜೆ. ಚವ್ಹಾಣ, (ಕೆಆರ್‌ಎಸ್) ರಾಮಚಂದ್ರ ನಾರಾಯಣ (ಕಚೇವು ಕ್ರಾಂತಿಕಾರಿ ಜೈ ಹಿಂದ್ ಸೇನಾ)

10 ಜನ ಪಕ್ಷೇತರ ಅಭ್ಯರ್ಥಿಗಳು :

ಗೋಪಾಲ ಎಂಪಿ ಗಾರಂಪಳ್ಳಿ, ಜೈರಾಮ ಕಾಶಪ್ಪ ಬುಕ್ಕ ವಕೀಲರು, ಡಾ.ಮೋರೆ ದೀನಕರ್, ದಿಲಿಪ್ ಕಾಡವಾದ, ಬಲಭೀಮ ಉಣ್ಣೆ, ರಾಮವಿಲಾಸ ರಾಮುಲಾಲಜಿ ನಾವಂದರ, ರಿಯಾಜ ಅಹ್ಮದ, ರೋಫ ಅಬ್ದುಲ ಗನಿ, ವಸೀಮಮೊದ್ದಿನ್, ಶಿವರಾಜ ಅಡಿವೆಪ್ಪ ಸತವಾರ ಅಂತಿಮ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ.

ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು :

ರಾಷ್ಟ್ರೀಯ ಅಭಿವೃದ್ಧಿ ಪಕ್ಷದ ಬಾಬು ಪಾಷಾ  ಹಾಗೂ ಸ್ವತಂತ್ರ ಅಭ್ಯರ್ಥಿ ಅಬ್ದುಲ ರಜಾಕ್‌ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳಾಗಿದ್ದಾರೆ.

ಮೇ. 7 ರಂದು ಮತದಾನ ನಡೆಯಲ್ಲಿದ್ದು ಜೂನ್ 4ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X