ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ.
ಮೃತವ್ಯಕ್ತಿ ರಾಜಕುಮಾರ್ ದಾಸರ್(27) ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆಯೇ ಟ್ಯಾಂಕ್ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕನ್ನು ಜನ ಪರಿಶೀಲಿಸಿದಾಗ ದಾಸರ್ನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಅಪವ್ಯಯ, ಆನಧಿಕೃತ ದುರ್ಬಳಕೆ ತಡೆಗಟ್ಟಿ; ತಾ.ಪಂ ಇಒ ಶಿವಪ್ರಕಾಶ್
ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ