ಬೀದರ್ | ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅಗತ್ಯ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

ಸುದ್ದಿ ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಅತ್ಯಂತ ಮುಖ್ಯವಾಗಿದ್ದು, ಮುದ್ರಣ ಮಾಧ್ಯಮಗಳು ಇಂದಿಗೂ ಆ ವಿಶ್ವಾಸ ಉಳಿಸಿಕೊಂಡಿವೆ. ಅದೇ ರೀತಿ ಪತ್ರಕರ್ತರು, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು, ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟರು.

- Advertisement -

ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ, ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪ್ರಜಾಪ್ರಭುತ್ವದ ಉಳಿವಿಗೆ ಭದ್ರವಾದ ಬುನಾದಿ ಹಾಕುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂಬುದು ಅತಿಶಯೋಕ್ತಿಯ ಮಾತಲ್ಲ. ಜನಾಭಿಪ್ರಾಯ ರೂಪಿಸುವ ಮಹತ್ವದ ಜವಾಬ್ದಾರಿಯನ್ನು ಮಾಧ್ಯಮಗಳು ಮಾಡುತ್ತಿವೆ. ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುತ್ತಿರುವ ಜನರಿರುವ ಸಮಾಜದಲ್ಲಿ ಮಾಧ್ಯಮಗಳ ಪಾತ್ರ, ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಹೇಳಿದರು.

“ಸತ್ಯಾನ್ವೇಷಣೆ ಮಾಡಿ ಜನರ ಮುಂದೆ ಸುದ್ದಿ ತಂದರೆ, ಜನಕ್ಕೆ ಸಮಾಜಕ್ಕೆ ಒಳಿತಾಗುತ್ತದೆ. ಭಾರತೀಯರಲ್ಲಿ ಭಾವನಾತ್ಮಕತೆ ಇದೆ. ಭಾವನಾತ್ಮಕ ವಿಚಾರ ಕೆರಳಿಸಿ ಲಾಭ ಮಾಡುವವರ ಕಾಲ ಇದಾಗಿದ್ದು, ಮಾಧ್ಯಮದವರು ಹೆಚ್ಚು ಜಾಗೃತರಾಗಿರಬೇಕು” ಎಂದರು.

5 ಸಾವಿರ ಕೋಟಿ ರೂ. ಸದ್ಬಳಕೆ

ಗಡಿ ಭಾಗದ ಬೀದರ್ ಜಿಲ್ಲೆಯ ಇಂದಿನ ಯವಜನರು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ. ಉತ್ತಮ ವೈದ್ಯರು, ವಿಜ್ಞಾನಿಗಳು, ಎಂಜಿನಿಯರ್‌ಗಳು, ರಾಜಕಾರಣಿಗಳು, ಶಿಕ್ಷಕರು, ಪತ್ರಕರ್ತರು ಎಲ್ಲರೂ ಇದ್ದಾರೆ. ಹಾಗೆಯೇ ಜಿಲ್ಲೆಯ ತಲಾದಾಯ ಹೆಚ್ಚಳವಾಗಬೇಕು. ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳು ಹೆಚ್ಚಿನ ಪ್ರಗತಿ ಹೊಂದಬೇಕು. ಸರ್ಕಾರ ಈ ಎಲ್ಲದರ ಬಗ್ಗೆ ಗಮನ ಹರಿಸುತ್ತದೆ. ಈ ಬಾರಿ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂ. ನೀಡಿದ್ದು, ಹಿಂದಿನ ವರ್ಷ ಖರ್ಚಾಗದೆ ಉಳಿದ 2 ಸಾವಿರ ಕೋಟಿ ರೂ. ಇದೆ. ಕೆಕೆಆರ್‌ಡಿಬಿ ವತಿಯಿಂದ ಕ್ರಿಯಾಯೋಜನೆ ರೂಪಿಸಿ ಮುಂದಿನ ಮಾರ್ಚ್ 31ರೊಳಗೆ ಈ ಹಣದ ಸದ್ಬಳಕೆ ಮಾಡಲಾಗುವುದು” ಎಂದು ಹೇಳಿದರು.

ಪಕ್ಷಾತೀತ ಅಭಿವೃದ್ಧಿ

“ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಬೇಕು. ಬಳಿಕ ಪಕ್ಷಾತೀತವಾಗಿ, ಶಾಸಕರು, ಸಚಿವರು, ಸಂಸದರು ಎಲ್ಲರೂ ಒಟ್ಟಾಗಿ ಜಿಲ್ಲೆಯ ಪ್ರಗತಿಗೆ ಶ್ರಮಿಸಬೇಕು” ಎಂದು ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

“371 ಜೆ ಪರಿಣಾಮಕಾರಿಯಾಗಿ ಅನುಷ್ಠಾನ ಆಗಬೇಕಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 30 ಸಾವಿರದಿಂದ 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕೇವಲ ವಿಶ್ವವಿದ್ಯಾಲಯ ಘೋಷಿಸಿ, 2 ಕೋಟಿ ರೂ. ಅನುದಾನ ನೀಡಿದರೆ ಸಾಕಾಗುವುದಿಲ್ಲ. ಈ ಬಗ್ಗೆ ಶೀಘ್ರವೇ ಪರಿಶೀಲಿಸಲಾಗುವುದು” ಎಂದು ಹೇಳಿದರು.

ಪತ್ರಕರ್ತರಿಗೆ ವಿಮೆ, ಬಸ್ ಪಾಸ್

“ಮಾಧ್ಯಮದ ಮಿತ್ರರಲ್ಲಿ ಶೇ.80ರಷ್ಟು ಮಂದಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಆರೋಗ್ಯ ವಿಮೆ ಇವರಿಗೆ ಅಗತ್ಯವಾಗಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡುವ ಬೇಡಿಕೆ ಮತ್ತು ಪತ್ರಕರ್ತರಿಗೆ ಗ್ರಾಮೀಣ ಸಾರಿಗೆಯಲ್ಲಿ ಪ್ರಯಾಣಿಸಲು ಬಸ್ ಪಾಸ್ ನೀಡುವ ಕುರಿತಂತೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡಲಾಗುವುದು” ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

ಹಿರಿಯ ಪತ್ರಕರ್ತರುಗಳಾದ ತಿ ತಾ ಶರ್ಮಾ, ಮೊಹರೆ ಹಣಮಂತರಾವ್, ಖಾದ್ರಿ ಶಾಮಣ್ಣ, ಶ್ಯಾಮರಾವ್, ಪಾಟೀಲ ಪುಟ್ಟಪ್ಪ ಮತ್ತು ಬೀದರ್ ಜಿಲ್ಲೆಯ ಹಿರಿಯ ಪತ್ರಕರ್ತರಾದ, ಶಿವಶರಣಪ್ಪ ವಾಲಿ, ದಮನ್ ಪಟೇಲ್, ವಿಶ್ವನಾಥ್ ಪಾಟೀಲ್, ಖಾಜಿ ಅರ್ಷದ್ ಅಲಿ ಮೊದಲಾದವರು ಪತ್ರಿಕೋದ್ಯಮಕ್ಕೆ ನೀಡಿರುವ ಕೊಡುಗೆ ಸ್ಮರಿಸಿದ ಸಚಿವರು, ಹಿರಿಯ ಆದರ್ಶ ಪಾಲಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...