ಬೀದರ್‌ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಅವ್ಯವಹಾರ ; ತನಿಖೆಗೆ ಆಗ್ರಹ

Date:

Advertisements

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಎಲ್ಲ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆಧಾರ್‌ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ವಿತರಿಸುವಂತೆ ಇಲಾಖೆ ಆಯುಕ್ತರ ಆದೇಶವಿದೆ. ಆದರೆ ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಸರ್ಕಾರದ ಆದೇಶ ಪಾಲಿಸದೆ ಮ್ಯಾನುವಲ್ ಹಾಜರಾತಿ ಪಡೆದು ವಿದ್ಯಾರ್ಥಿಗಳಿಗೆ ಆಹಾರ ಸಾಮಾಗ್ರಿ ವಿತರಿಸಿ ಬೋಗಸ್ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡುತ್ತಿದ್ದಾರೆʼ ಎಂದು ಪ್ರಜಾಪ್ರಭುತ್ವ‌ ಸಂರಕ್ಷಣಾ ಸಮಿತಿ ಸಂಸ್ಥಾಪಕ ಗಗನ್‌ ಫುಲೆ ಆರೋಪಿಸಿದ್ದಾರೆ.

ಮಂಗಳವಾರ ಬೀದರ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಹಾಸ್ಟೆಲ್‍ಗಳಲ್ಲಿ ಅಳವಡಿಸಲಾಗಿರುವ ಬಯೋಮೆಟ್ರಿಕ್ ಯಂತ್ರಗಳ ಮೂಲಕ ಒಬ್ಬ ವಿದ್ಯಾರ್ಥಿ ಮೂಲಕವೇ ಐದು ಮಂದಿಯ ಹಾಜರಾತಿ ದಾಖಲು ಮಾಡಲಾಗುತ್ತಿರುವ ಆರೋಪವೂ ಇದೆ. ಹಾಗಾಗಿ ಆಧಾರ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯವಾಗಿ ಜಾರಿಗೊಳಿಸಿದರೆ ಮಾತ್ರ ಅನುದಾನ ದುರ್ಬಳಕೆ ತಡೆಯಬಹುದಾಗಿದೆʼ ಎಂದು ಹೇಳಿದರು.

ʼಹಿಂದಳಿದ ವರ್ಗಗಳ ಇಲಾಖೆಯಡಿ ಬರುವ ಮೆಟ್ರಿಕ್‌ ಪೂರ್ವ ಹಾಸ್ಟೆಲ್‍ಗಳಲ್ಲಿ ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗೆ ಮಾಸಿಕ ತಲಾ ₹1,750 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗೆ ತಲಾ, ₹1,850 ಹಾಗೂ ಊಟ, ಉಪಾಹಾರ ವೆಚ್ಚ ಭರಿಸಲಾಗುತ್ತಿದೆ. 10 ತಿಂಗಳ ಅವಧಿಗೆ ಉಚಿತ ವಸತಿ, ಆಹಾರ, ಸಮವಸ್ತ್ರ ಹಾಗೂ ಇತರೆ ಸೌಲಭ್ಯಗಳಿಗೂ ಹಣ ಒದಗಿಸುತ್ತಿದೆ. ಆದರೆ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಆಧಿಕಾರಿಗಳು 2022ರ ಜುಲೈ 26ರಿಂದ ಮಾರ್ಚ್ 2025ರವರೆಗೆ ಸರ್ಕಾರದ ಆದೇಶ ಪಾಲಿಸದೆ ವಿದ್ಯಾರ್ಥಿಗಳಿಗೆ ಮ್ಯಾನುವಲ್‌ ಹಾಜರಾತಿ ಪ್ರಕಾರ ಆಹಾರ ವೆಚ್ಚದ ಬಿಲ್ ಪಾವತಿಸುತ್ತಿರುವುದು ಕಂಡು ಬಂದಿದೆʼ ಎಂದು ದೂರಿದರು.

Advertisements

ʼಹಿಂದುಳಿದ ವರ್ಗಗಳ ಇಲಾಖೆ ಆದೇಶಗಳನ್ನು ಗಾಳಿಗೆ ತೂರಿ ಇಲಾಖೆ ಅಧಿಕಾರಿಗಳು ಅಕ್ರಮ ವ್ಯವಹಾರ ಎಸಗಿ ಸರ್ಕಾರದ ಹಣ ದುರ್ಬಳಕೆ ಮಾಡಿದ್ದಾರೆ. ಹೀಗೆ ಜಿಲ್ಲೆಯ ಎಲ್ಲ ತಾಲ್ಲೂಕಿನ ಹಾಸ್ಟೆಲ್‌ಗಳಲ್ಲಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ತೆಗೆದುಕೊಳ್ಳದೆ ಕಣ್ಮುಚ್ಚಿ ಕುಳಿತ್ತಿದೆ. ಕೂಡಲೇ ಈ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೊಲೀಸ್‌ ಸಿಬ್ಬಂದಿ ಸ್ವಂತ ವಾಹನಗಳ ಮೇಲೆ ‘ಪೊಲೀಸ್’​ ಎಂದು ಬರೆಸುವಂತಿಲ್ಲ: ಪರಮೇಶ್ವರ್

ಪ್ರಜಾ ಪ್ರಭುತ್ವ ಸಂರಕ್ಷಣಾ ಸಮಿತಿಯ ಪ್ರಮುಖರಾದ ವೆಂಕಟರಾವ್‌ ಮೋರೆ, ವಿನೋದ ರತ್ನಾಕರ್‌, ಜೈವರ್ಧನ್‌ ಫುಲೆ, ಕಲ್ಲಪ್ಪ ಹಾಲಹಿಪ್ಪರ್ಗಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X