ಬೀದರ್‌ | ಗುಡುಗು ಸಹಿತ ಸಾಧಾರಣ ಮಳೆ; ಶನಿವಾರವೂ ಮಳೆಯಾಗುವ ಸೂಚನೆ ನೀಡಿದ ಹವಾಮಾನ ಇಲಾಖೆ

Date:

Advertisements

ಬೀದರ್ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇಂದು ಮಧ್ಯಾಹ್ನ 3.30ರಿಂದ ಸಂಜೆ 4.30ರ ತನಕ ಗುಡುಗು ಸಹಿತ ಸಾಧಾರಣ ಮಳೆ ಸುರಿದಿದೆ. ಇದರಿಂದ ತಾಪಮಾನದಲ್ಲಿ ಭಾರೀ ಇಳಿಕೆಯಾಗಿದ್ದು, ವಾತಾವರಣ ಸಂಪೂರ್ಣ ತಂಪಾಗಿರುವುದು ಕಂಡುಬಂದಿದೆ.

ಬಿಸಿಲಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ಸಾಧಾರಣ ಪ್ರಮಾಣದಲ್ಲಿ ಬಿಸಿಲು ಇತ್ತು. ಮಧ್ಯಾಹ್ನದ ಬಳಿಕ ದಟ್ಟ ಕಾರ್ಮೋಡ ಕವಿದು ಸುರಿದ ಮಳೆಗೆ ಇಳೆ ತಂಪಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಲ್ಪೆ ಮಹಿಳೆ ಮೇಲೆ ಹಲ್ಲೆ; ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?

ತಾಲೂಕಿನ ಅಮಲಾಪೂರ, ಚಿಟ್ಟಾ, ಘೋಡಂಪಳ್ಳಿ, ಯಾಕತಪೂರ, ಯದಲಾಪೂರ, ಶಹಾಪೂರ, ಗುನ್ನಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ಜಿಲ್ಲೆಯ ಬಸವಕಲ್ಯಾಣ, ಚಿಟಗುಪ್ಪ, ಹುಮನಾಬಾದ್‌, ಹುಲಸೂರಿನಲ್ಲಿ ಗುರುವಾರ ತಡರಾತ್ರಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವರ್ಷದ ಮೊದಲ ಮಳೆ ಪ್ರವೇಶಿಸಿದೆ. ಮಾರ್ಚ್‌ 22ರ ಶನಿವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X