ಬೀದರ್ | ಆಧುನಿಕ ಆಹಾರ ಪದ್ಧತಿ ಆರೋಗ್ಯಕ್ಕೆ ಒಳ್ಳೆಯದಲ್ಲ

Date:

Advertisements

ಆಧುನಿಕ ಆಹಾರ ಪದ್ಧತಿಯಿಂದ ಆರೋಗ್ಯ ಹದಗೆಡುತ್ತಿದ್ದು, ಮತ್ತೆ ನಾವು ಹಳೆಯ ಪರಂಪರೆಗೆ ಮಾರು ಹೋಗುವ ಅವಶ್ಯಕತೆ ಇದೆ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ದೈವತಾ ಪಲಂಪಲ್ಲೆ ಹೇಳಿದರು.

ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಸವಕಲ್ಯಾಣದ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆರೋಗ್ಯವೇ ಭಾಗ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಒತ್ತಡ ಜೀವನ ಶೈಲಿ ತೊರೆದು ನೆಮ್ಮದಿಯ ಬದುಕನ್ನು ನಡೆಸಲು ಆಹಾರ ಪದ್ಧತಿ ಮುಖ್ಯವಾಗಿದೆ ಎಂದರು.

Advertisements

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಮೀನಾಕ್ಷಿ ಬಿರಾದಾರ ಮಾತನಾಡಿ, ‘ನಮ್ಮ ಪೂರ್ವಜರು ಅನೇಕ ಕೆಲಸಗಳನ್ನು ಸ್ವತಃ ಮಾಡಿಕೊಳ್ಳುತ್ತಿದ್ದರು. ಅದರಿಂದ ಅವರಿಗೆ ವ್ಯಾಯಾಮ ದೊರೆಯುತ್ತಿತ್ತು. ಆಧುನಿಕ ತಂತ್ರಜ್ಞಾನ ಬಂದ ಬಳಿಕ ಇಂದು ಮನುಷ್ಯ ಸೋಮಾರಿಯಾಗಿದ್ದೇನೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಡಾ.ಮಕ್ತುಂಬಿ ಅವರು ಮಾತನಾಡಿ, ‘ಆಹಾರ ಬದಾವಣೆ ಇಂದಿನ ಅಗತ್ಯವಾಗಿದೆ. ಜಪಾನಿನ ತ್ರಿಕೋನ ಪದ್ದತಿಯನ್ನು ನಾವು ಅಳವಡಿಸಿಕೊಳ್ಳಬೇಕು. ಬೇಕರಿ ತಿಂಡಿ ತಿನಿಸು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ’ ಎಂದು ಹೇಳಿದರು.

ಜಿಲ್ಲಾ ತರಬೇತಿ ಆಯುಕ್ತ ಬಾಬುರಾವ್ ನಿಂಬೂರೆ, ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಅನೀಲಕುಮಾರ ಶಾಸ್ತ್ರಿ ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ ಮಕ್ಕಳು, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿದ್ದರಾಜ ಬೋಗಾರೆ ನಿರೂಪಿಸಿದರು. ಲಕ್ಷ್ಮಿ ಅವರು ಪ್ರಾರ್ಥನೆ ನಡೆಸಿಕೊಟ್ಟರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X