ಬೀದರ್ | ನನ್ನ ರಾಜಕೀಯ ಮುಗಿದಿಲ್ಲ, ಹೊಸ ಅಧ್ಯಾಯ ಆರಂಭವಾಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Date:

ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ. 91ನೇ ವಯಸ್ಸಿನಲ್ಲೂ ಕೂಡ ನೀವು ಯಾರೂ ಹೆದರಬೇಡಿ ಎಂದು ನಮಗೆ ಧೈರ್ಯ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

“ಬಂಡೆಪ್ಪ ಅವರದ್ದು ರಾಜಕೀಯ ಮುಗಿತು ಎಂದುಕೊಳ್ಳಬೇಡಿ. ಈಗ ಹೊಸ ಅಧ್ಯಾಯ ಆರಂಭವಾಗಿದೆ. ಜನರಿಗೋಸ್ಕರ ನಾವು ಕೆಲಸ ಮಾಡುತ್ತೇವೆ. ರಾಜಕೀಯ ಉಲ್ಟಾ ಪಲ್ಟಾ ಆಗುತ್ತಿರುತ್ತದೆ. ನಾವೆಲ್ಲರೂ ಸೇರಿ ಜನರಿಗಾಗಿ ಕೆಲಸ ಮಾಡೋಣ” ಎಂದು ನುಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಮ್ಮದು ರಾಜಕೀಯ ಹಿನ್ನೆಲೆಯ ಕುಟುಂಬವಲ್ಲ. ನಮ್ಮ ತಂದೆಯವರ ಕಾಲದಿಂದಲೂ ದಾನ ಧರ್ಮ ಮಾಡಿಕೊಂಡು ಬಂದಿರುವ ಕುಟುಂಬವಾಗಿದೆ. ಅಂದಿನಿಂದ ಇಲ್ಲಿಯವರೆಗೂ ದಾನ ಧರ್ಮ ಮಾಡಿಕೊಂಡು ಸಾಗುತ್ತಿದ್ದೇವೆ. ಚುನಾವಣೆಗೆ ನಿಲ್ಲಬೇಕು, ಶಾಸಕ ಆಗಬೇಕು ಎಂಬ ಆಸೆಯಂತೂ ಅಂದು ನನಗೆ ಇರಲಿಲ್ಲ. ಜನರ ಪ್ರೀತಿ ವಿಶ್ವಾಸದಿಂದಾಗಿ ರಾಜಕೀಯಕ್ಕೆ ಬಂದಿದ್ದೇನೆ. ಜನರಿಗೆ ಒಳಿತು ಮಾಡುವ ಉದ್ದೇಶದಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಸೋಲು ಗೆಲುವು ಎರಡನ್ನೂ ಕಂಡಿದ್ದೀನಿ. ರಾಜಕೀಯ ನದಿ ಇದ್ದಂತೆ, ಹರಿಯುತ್ತ ಸಾಗುತ್ತಿರುತ್ತದೆ. ನನ್ನ ಐದು ಚುನಾವಣೆಗಿಂತ ಹೆಚ್ಚಿನ ಬೆಂಬಲ ಈ ಚುನಾವಣೆಯಲ್ಲಿ ನನಗೆ ಸಿಕ್ಕಿತ್ತು. ಆದರೂ ಸೋಲಾಗಿದೆ” ಎಂದರು.

“ಈಗ ಚುನಾವಣೆ ಮುಗಿದಿದೆ. ನಾನು ಅಧಿಕಾರದಲ್ಲಿ ಇಲ್ಲದಿದ್ದಾಗಲೂ ಜನರ ಸೇವೆ ಮಾಡಿದ್ದೇನೆ. ಅಧಿಕಾರದಲ್ಲಿ ಇದ್ದಾಗಲೂ ಜನಪರ ಕೆಲಸ ಮಾಡಿದ್ದೇನೆ. ಪಕ್ಷ ಬದಲಾವಣೆ ಮಾಡುವುದಿಲ್ಲ. ಈ ಹಿಂದೆ ಸೋತ ಸಂದರ್ಭದಲ್ಲಿ ಕೂಡ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಿದ್ದೇನೆ. ಈಗಲೂ ಮಾಡುತ್ತೇನೆ” ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಸ್ಥಳೀಯ ಚುನಾವಣೆಗಳಿಗೆ ಸಿದ್ದರಾಗೋಣ:

ಕೆಲವೇ ತಿಂಗಳಲ್ಲಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆಯಲಿವೆ. ಜೆಡಿಎಸ್ ಅಧಿಕಾರಕ್ಕೆ ಬರುವಂತೆ ನಾವೆಲ್ಲರೂ ಸೇರಿ ಕೆಲಸ ಮಾಡಬೇಕಾಗಿದೆ. ತಳಮಟ್ಟದಿಂದ ಪಕ್ಷ ಸಂಘಟಿಸುವುದನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಬೇಕಾಗಿದೆ. ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆ, ಬಲವರ್ಧನೆ ಮಾಡೋಣ” ಎಂದು ಬೀದರ್ ದಕ್ಷಿಣ ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಪಕ್ಷದವರಿಂದಲೇ ನಮ್ಮ ತೇಜೋವಧೆಯಾಗುತ್ತಿದೆ; ಡಿವಿಎಸ್‌ ಆಕ್ರೋಶ

ಈ ವೇಳೆ ಜೆಡಿಎಸ್ ಪ್ರಮುಖರಾಗಿರುವ ಮಾರುತಿ ಖಾಶೆಂಪುರ್, ಸಂಜುರೆಡ್ಡಿ ನಿರ್ಣಾ, ವಿಜಯಕುಮಾರ್ ಖಾಶೆಂಪುರ್, ಶಾಂತಲಿಂಗ ಸಾವಳಗಿ, ದೇವೇಂದ್ರ ಸೋನಿ, ರಾಜು ಕಡ್ಯಾಳ, ಸಂತೋಷ ರಾಸೂರು, ಶಿವರಾಜ್ ಹುಲಿ, ಸಜ್ಜದ್ ಸಾಹೇಬ್, ಇಸ್ಮಾಯಿಲ್ ಕಮಠಾಣಾ, ರಾಜಶೇಖರ ಜವಳೆ, ಮನು ನಾಯ್ಕ್, ಪುಂಡಲೀಕ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...

ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ...