ಬೀದರ್ | ಗ್ರಾಮ ಪಂಚಾಯತಿ ನಿರ್ಲಕ್ಷ್ಯ; ನಿವಾಸಿಗಳಿಂದಲೇ ಚರಂಡಿ ಸ್ವಚ್ಛತೆ ಕಾರ್ಯ

Date:

Advertisements

ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳಾಗಲಿ ಗ್ರಾಮ ಪಂಚಾಯತ್ ಅಧಿಕಾರಿಗಳಾಗಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳದಿರುವುರಿಂದ ಬೇಸತ್ತು ಬೀದರ್ ಜಿಲ್ಲೆ ಹುಲಸೂರು ವಾರ್ಡ್ ನಿವಾಸಿಗಳು ತಾವೇ‌ ಸ್ವಚ್ಛತೆಗೆ ಮುಂದಾಗಿದ್ದಾರೆ.

ಹುಲಸೂರು ತಾಲೂಕು ಕ್ಷೇತ್ರ ಇನ್ನೂ ಗ್ರಾಮ ಪಂಚಾಯಿತಿ ಆಡಳಿತ ಕೇಂದ್ರವಾಗಿದೆ. ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಇದೇ ಅವ್ಯವಸ್ಥೆ ಇದ್ದು, ಪಂಚಾಯತ್ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿಗೆ ಕ್ಯಾರೇ ಎನ್ನದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಾಲ್ಕನೇ ವಾರ್ಡ್ ನಿವಾಸಿಗಳು ತಾವೇ ಚರಂಡಿಗೆ ಇಳಿದು ಸ್ವಚ್ಛಗೊಳಿಸಿದರು.

ಈ ದಿನ.ಕಾಮ್‌ನೊಂದಿಗೆ ಸ್ಥಳೀಯ ನಿವಾಸಿಗಳು ಮಾತನಾಡಿ, “ಚುನಾವಣೆ ಸಂದರ್ಭದಲ್ಲಿ ಬೆಟ್ಟದಷ್ಟು ಆಶ್ವಾಸನೆ ನೀಡಿ ಗೆಲ್ಲುತ್ತಾರೆ. ನಂತರ ಮೂಲ ಸೌಕರ್ಯ ಒದಗಿಸಲೂ ತಾತ್ಸಾರ ತೋರುತ್ತಾರೆ. ಕಳೆದ ಕೆಲ ತಿಂಗಳಿಂದ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಮೊದಲೇ ಮಳೆಗಾಲ ಚರಂಡಿ ಇನ್ನಷ್ಟು ತುಂಬಿ ಗಬ್ಬು ನಾರುತ್ತಿದೆ. ಹೀಗಾಗಿ ಸ್ಥಳೀಯ ಯುವಕರು, ಹಿರಿಯರು ಸೇರಿ ಚರಂಡಿ ಸ್ವಚ್ಛಗೊಳಿಸಿದ್ದೇವೆ” ಎಂದು ಸ್ಥಳೀಯ ನಿವಾಸಿಗಳು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಆಗ್ರಹ

ವಾರ್ಡ್ ನಿವಾಸಿ ದತ್ತಾ ಮೋರೆ ಈ ದಿನ.ಕಾಮ್ ಜೊತೆ ಮಾತನಾಡಿ “ವಾರ್ಡ್ ಚರಂಡಿ ತ್ಯಾಜ್ಯದಿಂದ ಗಬ್ಬುನಾರುತ್ತಿದ್ದು, ದುರ್ವಾಸನೆಯಿಂದ ನಿತ್ಯ ಮೂಗುಮುಚ್ಚಿ ಓಡಾಡುವಂತಾಗಿತ್ತು. ರಸ್ತೆ ಆಸುಪಾಸು ಆಳೆತ್ತರದ ಗಿಡ-ಗಂಟಿ ಬೆಳೆದು ವಿಷಜಂತುಗಳ ಆವಾಸ ಸ್ಥಾನವಾಗಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮಕ್ಕೆ ಮುಂದಾಗಲಿಲ್ಲ. ಹೀಗಾಗಿ ಓಣಿಯ ನಿವಾಸಿಗಳೇ ಮುಂದಾಗಿ ಸ್ವಚ್ಛಗೊಳಿಸಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X