ಬೀದರ್‌ | ಅಧಿಕಾರಿಗಳ ನಿರ್ಲಕ್ಷ್ಯ : ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚಿದ ಯುವಕರು!

Date:

Advertisements

ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಬೀದರ್‌ದಿಂದ ಔರಾದ್‌ ತಾಲ್ಲೂಕಿನ ಕಂದಗೂಳ-ಖಾನಾಪುರ ಮಾರ್ಗವಾಗಿ ವಡಗಾಂವ್‌ ಮುಖಾಂತರ ತೆಲಂಗಾಣ ರಾಜ್ಯದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಬಿದ್ದಿರುವ ಆಳವಾದ ಗುಂಡಿಗಳನ್ನು ಕಂದಗೂಳ-ಖಾನಾಪುರ ಗ್ರಾಮಗಳ ಗ್ರಾಮಸ್ಥರು ಗುಂಡಿಗಳಿಗೆ ಮಣ್ಣು ಹಾಕಿ, ತಾತ್ಕಾಲಿಕವಾಗಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ರಸ್ತೆ ಡಾಂಬಾರು ಕಂಡು ಹಲವು ವರ್ಷಗಳಾಗಿವೆ. ಹೆಚ್ಚಿನ ಸಂಚಾರದಿಂದ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದುರಸ್ತಿಗೆ ಈ ಬಾಗದ ಹಳ್ಳಿಗಳ ಮುಖಂಡರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಗುಂಡಿ ಮುಚ್ಚದೆ ನಿರ್ಲಕ್ಷ ವಹಿಸಿದ್ದಾರೆ. ನಿತ್ಯ ಸಂಚಾರ ಮಾಡುವ ಬಸ್‌ಗಳು, ವಾಹನಗಳಿಗೆ ಸಮಸ್ಯೆ ಉಂಟಾಗಿತ್ತು ಎಂದು ಸ್ಥಳೀಯರು ಹೇಳುತ್ತಾರೆ.

Advertisements
WhatsApp Image 2025 07 16 at 8.25.13 PM
ಬೀದರ್-ವಡಗಾಂವ(ದೇ) ಹೆದ್ದಾರಿಯಲ್ಲಿ ಕಂದಗೂಳ ಸೇತುವೆ ಮೇಲಿನ ಗುಂಡಿಗಳಿಗೆ ಮರುಮ ಹಾಕಿ ತಾತ್ಕಾಲಿಕವಾಗಿ ಮುಚ್ಚಿದರು.

ಮುಂಗಾರು ಪೂರ್ವ ಹಾಗೂ ಜೂನ್‌ ತಿಂಗಳ ಮೊದಲ ಮಳೆಯಿಂದ ಈ ರಸ್ತೆಯಲ್ಲಿ ಮತ್ತೆ ಗುಂಡಿಗಳು ರಾರಾಜಿಸುತ್ತಿದ್ದವು. ಹೀಗಾಗಿ ಖಾನಾಪುರ, ಕಂದಗೂಳ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕರ್ತರು 6-7 ಸಾವಿರ ಹಣ ಸಂಗ್ರಹಿಸಿ ಸಿಮೆಂಟ್‌ ಕಾಂಕ್ರಿಟ್‌ನಿಂದ ಗುಂಡಿ ಮುಚ್ಚಿದ್ದೇವೆ. ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು, ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕು. ಬಾಕಿ ಉಳಿದಿರುವ ರಸ್ತೆಗೆ ಕಾಂಕ್ರೀಟ್ ಹಾಕಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಖಾನಾಪುರ ಗ್ರಾಮಸ್ಥ ಕಾಶಿನಾಥ ಬೆಲ್ಲೆ ಆಗ್ರಹಿಸಿದ್ದಾರೆ.

ʼಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತಿವೆ. ರಸ್ತೆ ಗುಂಡಿ ಸಮಸ್ಯೆಯಿಂದ ಕೆಲ ಸವಾರರು ಬಿದ್ದು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಪಂಚ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲವೇʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ

ಸಾಮಾಜಿಕ ಕಳಕಳಿಯ ಯುವಕರಾದ ದತ್ತಾತ್ರಿ, ರಾಜಕುಮಾರ್, ಸಂಜುಕುಮಾರ್ ಜ್ಯೋತಿ, ನಾಗೇಶ್, ಜಫರ್ ಹುಸೇನ್ ಸಾಬ್, ದಯಾನಂದ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X