ಬೀದರ್‌ | ಪತ್ರಿಕೆಗಳು ದಾಖಲೆಯಾಗಿ ಉಳಿಯುತ್ತವೆ : ರಾಜಶ್ರೀ ಸ್ವಾಮಿ

Date:

Advertisements

ದೃಶ್ಯ, ಸಾಮಾಜಿಕ ಮಾಧ್ಯಗಳು ಅದಷ್ಟೇ ಸದ್ದು ಮಾಡಿದರೂ ಪತ್ರಿಕೆಗಳು ಜನರ ವಿಶ್ವಾಸ ಉಳಿಸಿಕೊಂಡು ಮಹತ್ವ ಕಾಪಾಡಿಕೊಂಡಿವೆ ಎಂದು ಕೆಪಿಸಿಸಿ ನೂತನ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಅವರು ನುಡಿದರು.

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಹಾಗೂ ವರದಿಗಾರರ ಸಂಘದ ಆಶ್ರಯದಲ್ಲಿ ನಗರದ ಬೀದರ ಸವಿತಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುದ್ರಣ ಮಾಧ್ಯಮದ ಮೇಲೆ ಜನರು ಹೆಚ್ಚು ನಂಬಿಕೆ, ವಿಶ್ವಾಸವಿದೆ. ಪತ್ರಿಕೆಗಳು ದೀರ್ಘಕಾಲ ದಸ್ತಾವೇಜು ರೀತಿಯಲ್ಲಿ ಶಾಶ್ವತ ದಾಖಲೆಯಾಗಿ ಉಳಿಯುತ್ತವೆ ಎಂದು ಅಭಿಪ್ರಾಯಪಟ್ಟರು.

Advertisements

ಇದೇ ಸಂದರ್ಭದಲ್ಲಿ ʼಸಮೃದ್ಧಿಯ ನೆಲೆʼ ಎಂಬ ನೂತನ  ಪತ್ರಿಕೆ ಹಾಗೂ ವೆಬ್‌ಸೈಟ್ ಲೋಕಾರ್ಪಣೆ ನೆರೆವೇರಿತು.

ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಮಾಳಪ್ಪ ಅಡಸಾರೆ, ಜನವಾದಿ ಮಹಿಳಾ ಸಂಘಟನೆಯ ಲೀಲಾ ಸಂಗ್ರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಘದ ಅಧ್ಯಕ್ಷರೂ ಆದ ಹಿರಿಯ ಪತ್ರಕರ್ತರಾದ ಗಂಧರ್ವ ಸೇನಾ ಅಧ್ಯಕ್ಷತೆ ವಹಿಸಿದರು. ಸಮೃದ್ಧಿಯ ನೆಲೆ ಸಂಪಾದಕಿ ಕೀರ್ತಿ ಸೇನಾ

ಪತ್ರಕರ್ತರಾದ ಶೈಲೆಂದ್ರ ಕಾವಡಿ ಹುಮನಾಬಾದ, ಸಂತೋಷ ಹಡಪದ ಭಾಲ್ಕಿ, ರಾಜಶೇಖರ ಪಾಟೀಲ, ಮಹ್ಮದ್ ಯೂಸುಫ್ ರಹಮ್ ಬಿದ್ರಿ, ನಾಗಶೆಟ್ಟಿ ಧರಂಪುರ, ರವಿಂದ್ರ ಕಾಂಬಳೆ, ಭೀಮರಾವ ಬೀದರಕರ, ಸಂಧ್ಯಾರಾಣಿ, ಸುಶ್ಮೀತಾ ಮೋರೆ, ಪತ್ರಿಕಾ ವಿತರಕರಾದ ಸದಾನಂದ ಹಮೀಲಪುರೆ, ರಾಮಚಂದ್ರ ಕೊಂಡಾ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಒಳಮೀಸಲಾತಿ ಜಾರಿ ವಿಳಂಬ : ಮಾದಿಗ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X