ಬೀದರ್‌ | ನಿರಂತರ ಅಧ್ಯಯನದಿಂದ ಆದರ್ಶ ಶಿಕ್ಷಕನಾಗಲು ಸಾಧ್ಯ : ಜಗನ್ನಾಥ ಹೆಬ್ಬಾಳೆ

Date:

ಆದರ್ಶ ಶಿಕ್ಷಕ ಎನಿಸಿಕೊಳ್ಳಲು ಉತ್ತಮ ಬೋಧನೆ, ಶಿಸ್ತು, ಸಹಕಾರ, ಸತತ ಅಧ್ಯಯನ ಸೇರಿ ಹಲವು ಆದರ್ಶಮಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪ್ರೊ.ಜಗನ್ನಾಥ ಹೆಬ್ಬಾಳೆ ತಿಳಿಸಿದರು.

- Advertisement -

ಬೀದರ್‌ ನಗರದ ವಿದ್ಯಾಶ್ರೀ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ವಿದ್ಯಾಶ್ರೀ ಮಾದರಿ ಪ್ರಾಥಮಿಕ ಶಾಲೆ ಹಾಗೂ ವಿದ್ಯಾನಿಧಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʼಶಿಕ್ಷಕರು ನಿರಂತರವಾಗಿ ಕಲಿಯುತ್ತಿರಬೇಕು. ಪ್ರಯತ್ನಶೀಲರಾಗುವುದರ ಜೊತೆಗೆ ಕ್ರಿಯಾಶೀಲರಾಗಿ ಮಕ್ಕಳ ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರುವಂತೆ ಬೋಧಿಸಬೇಕು. ಮಕ್ಕಳ ಜೀವನ ಉಜ್ವಲವಾಗುವಂತೆ ಅವರಿಗೆ ಮಾರ್ಗದರ್ಶನ ಮಾಡಬೇಕು. ಸರಳ ಜೀವನ, ಉದ್ವೇಗರಹಿತ, ಪರಿಪೂರ್ಣತೆ ಮತ್ತು ಪರಿಪಕ್ವತೆ ಹೊಂದಿರಬೇಕುʼ ಎಂದು ಕಿವಿಮಾತು ಹೇಳಿದರು.

ವಿದ್ಯಾಶ್ರೀ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಗಣಪತಿ ಸೋಲಪುರೆ ಮಾತನಾಡಿ, ʼಶಿಕ್ಷಕರಾದವರು ಧನಾತ್ಮಕ ವಿಚಾರಗಳೊಂದಿಗೆ, ಆಕರ್ಷಕ ನಿರೂಪಣಾ ಶಕ್ತಿ ಹೊಂದಿರಬೇಕು. ಆಧುನಿಕತೆಗೆ ಹೊಂದಿಕೊಂಡು ಡಿಜಿಟಲ್ ಉಪಕರಣಗಳನ್ನು ಸದ್ಬಳಕೆ ಮಾಡಿಕೊಂಡು ಬೋಧಿಸಬೇಕು ಎಂದು ಹೇಳಿದ ಅವರು, ಶಾಲೆಯ ಎಲ್ಲಾ ಕಾರ್ಯಗಳಿಗೆ ಸಹಕಾರ ನೀಡುತ್ತಿರುವ ಟ್ರಸ್ಟ್ ಅಧ್ಯಕ್ಷೆ ಶೀಲಾ ದೇಶಪಾಂಡೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಬೀದರ ತಾಲೂಕಾಧ್ಯಕ್ಷ ಎಸ್.ಬಿ.ಕುಚಬಾಳ, ಟ್ರಸ್ಟ್ ಖಜಾಂಚಿ ರೇಣುಕಾ ಆರ್.ಮಂಗಲಗಿ, ಟ್ರಸ್ಟ್ ಸದಸ್ಯರಾದ ವಿಜಯಲಕ್ಷ್ಮಿ ಸೋಲಪುರೆ, ಕೇದಾರ ಎಂ.ದೇಶಪಾಂಡೆ, ಆದರ್ಶ ಮಂಗಲಗಿ, ಶಾಲೆಯ ಮುಖ್ಯಗುರು ರಾಘವೇಂದ್ರ ಕುಲಕರ್ಣಿ ಸೇರಿದಂತೆ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...