ಬೀದರ್‌ | ಪಿಯುಸಿ ಫಲಿತಾಂಶ : ಶಾಹೀನ್‍ ಕಾಲೇಜಿಗೆ 154 ಅಗ್ರಶ್ರೇಣಿ

Date:

Advertisements

ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೀದರ್ ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಹಾಗೂ ಕಲಾ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅರ್ಚನಾ ಶೇ 96.83 ರಷ್ಟು ಅಂಕ ಗಳಿಸಿ ಕಾಲೇಜಿಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಫರಾಹಾ ಶೇ 96, ಖುಷಿ ಮಲ್ಲಿಕಾರ್ಜುನ ಹೂಗಾರ್ ಶೇ 95.50, ಸೃಷ್ಟಿ ಶೇ 95.17 ರಷ್ಟು ಅಂಕ ಪಡೆದು ಗಮನ ಸೆಳೆದಿದ್ದಾರೆ.‌

WhatsApp Image 2025 04 09 at 12.05.04 PM
ಸೃಷ್ಟಿ, ಶಿಫಾ, ಭಾಗ್ಯಶ್ರೀ

ಕಲಾ ವಿಭಾಗದಲ್ಲಿ ಶಿಫಾ ಶೇ 92.66 ರಷ್ಟು ಅಂಕ ಪಡೆದು ಕಾಲೇಜಿಗೆ ಮೊದಲಿಗರಾಗಿದ್ದಾರೆ. ಭಾಗ್ಯಶ್ರೀ ಶೇ 90.16 ರಷ್ಟು ಅಂಕ ಗಳಿಸಿದ್ದಾರೆ. ಭಾಗ್ಯಶ್ರೀ ಇತಿಹಾಸದಲ್ಲಿ 100ಕ್ಕೆ 100 ಅಂಕ ಪಡೆದು ಸಾಧನೆ ಮೆರೆದಿದ್ದಾರೆ.

Advertisements

ಕಾಲೇಜಿಗೆ ಶೇ 91.25 ರಷ್ಟು ಫಲಿತಾಂಶ ಲಭಿಸಿದೆ. 154 ವಿದ್ಯಾರ್ಥಿಗಳು ಅಗ್ರಶ್ರೇಣಿ, 846 ಪ್ರಥಮ ದರ್ಜೆ ಹಾಗೂ 65 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಸ್ಪರ್ಧಾತ್ಮಕ ಶಿಕ್ಷಣ, ಉತ್ತಮ ಶೈಕ್ಷಣಿಕ ವಾತಾವರಣ, ಆಡಳಿತ ಮಂಡಳಿ ಮಾರ್ಗದರ್ಶನ, ಉಪನ್ಯಾಸಕರು, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದಾಗಿ ಕಾಲೇಜು ಪರೀಕ್ಷೆಯಲ್ಲಿ ಸಾಧನೆಗೈಯ್ಯಲು ಸಾಧ್ಯವಾಗಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X