ಬೀದರ್‌ | ರಾಜ್ಯಾದ್ಯಂತ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು: ಆರ್‌ಪಿಐ

Date:

ಪ್ರಚಲಿತ ವಿದ್ಯಮಾನ ಹಾಗೂ ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಲೋಕಸಭೆ ಚುನಾವಣೆಯಲ್ಲಿ‌ ಆರ್‌ಪಿಐ (ಅಂಬೇಡ್ಕರ್) ಪಕ್ಷವು ಎಲ್ಲ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಘಟನಾಕರರು ತಿಳಿಸಿದ್ದಾರೆ.

- Advertisement -

ಬೀದರ್‌ನಲ್ಲಿ ಆರ್‌ಪಿಐ (ಅಂಬೇಡ್ಕರ್) ಪಕ್ಷದ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. “ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಪ್ರತಿ ಹಳ್ಳಿಯಲ್ಲಿ ದಲಿತರಿಗೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು. ಚಿತಭಸ್ಮ ಶೆಡ್ ನಿರ್ಮಾಣ, ಸುತ್ತುಗೋಡೆ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸಸಿಗಳನ್ನು ನೆಟ್ಟು ನೆರಳಿನ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯಾದ್ಯಂತ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಎಲ್ಲ ಹಂತದ ಸರ್ಕಾರಿ ನೌಕರಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಜೊತೆಗೆ ಸರ್ಕಾರಿ ಶಾಲೆಯಲ್ಲಿ ಕಲಿತವರಿಗೆ ಸರ್ಕಾರಿ ನೌಕರಿ ಎಂಬ ಆದೇಶವನ್ನು ಹೋರಡಿಸಬೇಕು” ಎಂದು ಆಗ್ರಹಿಸಿದರು.

“ಕರ್ನಾಟಕದಲ್ಲಿ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಪ್ರತಿ ಜಿಲ್ಲೆಗೊಂದು ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು. ಜಿಲ್ಲಾವಾರು ಐಎಎಸ್‌ಐಪಿಎಸ್ ಹಾಗೂ ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು. ಪದವಿ ಮುಗಿಸಿ ನೌಕರಿಗಾಗಿ ಕಾಯುತ್ತಿರುವ 21-40 ವರ್ಷದ ಎಲ್ಲ ನಿರುದ್ಯೋಗಿಗಳಿಗೆ ₹3000 ಧನ ಸಹಾಯ ನೀಡಬೇಕು” ಎಂದು ಒತ್ತಾಯಿಸಿದರು.

“ಕರ್ನಾಟಕದಲ್ಲಿ ಪ್ರತಿ ದಲಿತ ಕುಟುಂಬಕ್ಕೆ 2 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ 5 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಪ್ರತಿ ಜಿಲ್ಲೆಯಲ್ಲಿ ಕ್ರೀಡೆಗೆ ಉತ್ತೇಜನ ನೀಡಬೇಕು. ಪ್ರತಿ ಹಂತದಲ್ಲಿರುವ ಗ್ರಂಥಾಲಯಗಳಿಗೆ ಡಾ. ಬಿ ಆರ್ ಅಂಬೇಡ್ಕರ್ ಗ್ರಂಥಾಲಯ ಎಂದು ಹೆಸರಿಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಲಿಂಗತ್ವ ಅಲ್ಪಸಂಖ್ಯಾತರೂ ಮನುಷ್ಯರೆ, ನಾವು ಸಂವಿಧಾನದ ಅಡಿಯಲ್ಲಿ ಹೆಜ್ಜೆ ಹಾಕಬೇಕು: ಅಕ್ಷತಾ ಕೆ.ಸಿ

“ಪಠ್ಯಪುಸ್ತಕ ಪರಿಷ್ಕರಣೆ ತುರ್ತಾಗಿ ಮಾಡಬೇಕು. ಶಾದಿ ಭಾಗ್ಯ ಯೋಜನೆ ಜಾರಿ ಮಾಡಬೇಕು. ಅಸ್ಪೃಶ್ಯತೆ ನಿವಾರಣೆಗೆ ಜಾಗೃತಿ ಮೂಡಿಸಬೇಕು. ಜೀತ ಪದ್ದತಿ ನಿರ್ಮೂಲನೆ ಮಾಡಬೇಕು. ಜೀತದಾಳು ಎಂದು ಗುರುತಿಸಿದ ವ್ಯಕ್ತಿಗೆ ಬಿಡುಗಡೆಗೋಳಿಸಿ ಸರ್ಕಾರದ ಸೌಲಭ್ಯ ನೀಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ರಾಷ್ಟ್ರೀಯ ಉಪಾಧ್ಯಕ್ಷ ಜಲಾಲ್ ಶೇಕ್, ರಾಜ್ಯಾಧ್ಯಕ್ಷ ಮಹೇಶ ಗೋರನಾಳಕರ್, ರಾಜ್ಯ ಕಾರ್ಯಾಧ್ಯಕ್ಷ ಜೀತೆಂದ್ರ ಕಾಂಬಳೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹೆಬ್ಬಾಳ ವೆಂಕಟೇಶ ಮತ್ತು ಡಾ.ಭಾನುಪ್ರಕಾಶ, ಅಲ್ಪಸಂಖ್ಯಾತರ ಘಟಕದ ಯುವ ಅಧ್ಯಕ್ಷ ಸೈಯದ್ ಇಸ್ಮಾಯಿಲ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...