ಬೀದರ್‌ | ಸತ್ಯಪಾಲ್ ಮಲಿಕ್ ನೇರ ನಿಷ್ಠುರ ರಾಜಕಾರಣಿ

Date:

Advertisements

ಇತ್ತೀಚೆಗೆ ನಿಧನರಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬೀದರ ನಗರದಲ್ಲಿ ವಿಶ್ವ ಕ್ರಾಂತಿ ದಿವ್ಯಾಪೀಠ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ದಿವ್ಯಾಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು ಮಾತನಾಡಿ, ʼಸತ್ಯಪಾಲ್ ಮಲಿಕ್ ಸತ್ಯಶುದ್ಧ ರಾಜಕಾರಣಿ. ನೇರ ನಿಷ್ಠರವಾಗಿ ಮಾತನಾಡದ ಇಂದಿನ ರಾಜಕಾರಣದಲ್ಲಿ ಸತ್ಯಾಪಾಲ್‌ ಅವರ ವ್ಯಕ್ತಿತ್ವ ಭಿನ್ನವಾಗಿತು. ಅವರ ಸತ್ಯ ಮಾತುಗಳೇ ಅವರಿಗೆ ಮುಳುವಾಗಿ ಕೊನೆಗೆ ಸುಳ್ಳು ಆರೋಪಗಳ ತನಿಖೆಗೆ ಒಳಗಾಗಿದ್ದು ದೇಶದ ದುರಂತ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಧೋರಣೆ ಸಲ್ಲದುʼ ಎಂದರು.

ಸಾಮಾಜಿಕ ಚಿಂತಕ ಬಿ.ವಿ ಜಗದೀಶ್ವರ ಮಾತನಾಡಿ, ʼಸತ್ಯಪಾಲ್ ಮಲಿಕ್‌ ಅವರು ಮಾಜಿ ಪ್ರಧಾನಿ ಚೌಧರಿ ಚರಣಸಿಂಗ್‌ ಅವರ ಭಾರತೀಯ ಕ್ರಾಂತಿ ದಳ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. ಶಾಸಕ, ರಾಜ್ಯಸಭಾ ಸದಸ್ಯರಾಗಿದ್ದರು. ಸಮಾಜವಾದಿ ಪಕ್ಷದಲ್ಲಿ ಮುಂದುವರೆದರು. 2004ರಿಂದ ಬಿಜೆಪಿಗೆ ಸೇರಿ ಬಿಹಾರ, ಒಡಿಶಾ, ಗೋವಾ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರುʼ ಎಂದು ಸ್ಮರಿಸಿದರು.

Advertisements

ʼಸತ್ಯಪಾಲ್‌ ಅವರು ಸಂದಿಗ್ಧ ಸಾಮಾಜಿಕ ಸನ್ನಿವೇಶದಲ್ಲಿ ತಮ್ಮ ರಾಜಕೀಯ ಚಾಕಚಕ್ಯತೆ ಮೆರೆದ ಸತ್ಯ ಶುದ್ಧ ಹಸ್ತ ರಾಜಕಾರಣಿ. ಇಂದಿನ ಯುವ ಪೀಳಿಗೆ ಸಮಾಜಘಾತುಕ ಶಕ್ತಿಯಿಂದ ಎಚ್ಚರವಹಿಸಿ ಶುದ್ಧ ರಾಜಕಾರಣ ಕಟ್ಟಲು ಮುಂದಾಗಬೇಕು. ಸತ್ಯಪಾಲ್‌ ಮಲಿಕ್‌ ಅಂತಹ ಅಪರೂಪ ರಾಜಕೀಯ ನಾಯಕರು ನಮಗೆ ಆದರ್ಶ ಆಗಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಸಭೆಯಲ್ಲಿ ಸಾಮಾಜಿಕ ಚಿಂತಕರಾದ ಶಿವಯ್ಯ ಸ್ವಾಮಿ, ಸಿದ್ದು ಫುಲಾರಿ ಮತ್ತಿರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X