ಬೀದರ್‌ | ಆತ್ಮಬಲದಿಂದ ಯಶಸ್ಸು ಸುಲಭ : ಮಲ್ಲಮ್ಮಾ ತಾಳಂಪಳ್ಳಿ

Date:

Advertisements

ವಿದ್ಯಾರ್ಥಿ ಜೀವನದಲ್ಲಿ ಮನೋಬಲ, ಆತ್ಮಬಲವಿದ್ದರೆ ಮಾತ್ರ ಯಶಸ್ಸು ಸುಲಭವಾಗಿ ಸಾಧಿಸಲು ಸಾಧ್ಯ ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮಲ್ಲಮ್ಮ ಎಂ.ತಾಳಂಪಳ್ಳಿ ಹೇಳಿದರು.

ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ
ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ʼಜೀವನುದ್ದಕ್ಕೂ ಪ್ರತಿ ಹಂತದಲ್ಲಿಯೂ ಯಶಸ್ಸಿಗೆ ಪ್ರಯತ್ನಿಸಬೇಕುʼ ಎಂದರು.

ʼಕಾಲೇಜಿನಲ್ಲಿರುವ ಒಳ್ಳೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉತ್ತಮ ಜ್ಞಾನ ಪಡೆದು ಉನ್ನತ ಹುದ್ದೆ ಪಡೆಯಬೇಕು. ಕುಟುಂಬಸ್ಥರು, ಶಿಕ್ಷಕರು ಇಟ್ಟಿರುವ ವಿಶ್ವಾಸಕ್ಕೆ ಪಾತ್ರರಾಗಲು ಮುನ್ನಡೆಯಬೇಕುʼ ಎಂದು ಸಲಹೆ ನೀಡಿದರು.

Advertisements

ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಎನ್.ಆರ್.ಕೋಡ್ಲೆ ಮಾತನಾಡಿ, ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಜೀವನದಲ್ಲಿ ಮುನ್ನುಗ್ಗಬೇಕಾಗಿದೆ. ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ, ಉಚ್ಛ ಶ್ರೇಣಿಯಲ್ಲಿ ಪಾಸಾಗಿ, ಮುಂದಿನ ಭವಿಷ್ಯಕ್ಕಾಗಿ ಗಂಭೀರವಾಗಿ ಚಿಂತಿಸಬೇಕು ಸದಾ ಯಶಸ್ಸಿನ ಹಂಬಲವಿರಬೇಕುʼ ಎಂದು ಕಿವಿಮಾತು ಹೇಳಿದರು.

WhatsApp Image 2025 07 03 at 4.18.28 PM

ಬಿಇಟಿ ಸಂಸ್ಥೆಯ ನಿರ್ದೇಶಕ ಹಾಗೂ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಅವರು ಮಾತನಾಡಿ, ʼಜೀವನದಲ್ಲಿ ಉತ್ತಮ ಶಿಕ್ಷಣ ಜತೆಗೆ ಒಳ್ಳೆಯ ಸಂಸ್ಕಾರ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ. ದೇಶದ ಸೇವೆಯಲ್ಲಿ ತೊಡಗಿಕೊಂಡು ಸಮಾಜದ ಒಳಿತಿಗಾಗಿ ಶ್ರಮಿಸಬೇಕುʼ ಎಂದು ಹೇಳಿದರು.

ಬಸವಕಲ್ಯಾಣ ಐಟಿಐ ಕಾಲೇಜಿನ ಪ್ರಾಚಾರ್ಯ ಶಿವಕುಮಾರ ಸ್ವಾಮಿ ಹಾಗೂ ಬಸವಕಲ್ಯಾಣ ಇಂಜಿನೀಯರಿಂಗ್ ಕಾಲೇಜಿನ ಕಚೇರಿ ಅಧೀಕ್ಷಕರು ವೃಷೀಕೇತ ಭೂಸಾರೆ ಅವರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಿಎಂಗೆ ಮನವಿ

ಬಸವಕಲ್ಯಾಣ ಬಿಇಟಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಎಲಾಲ, ಕುಲಸಚಿವ ಪ್ರೇಮಸಾಗರ ಪಾಟೀಲ, ಪಿಆರ್‌ಒ ಶಂಕರ ಆಗರಗಿ ಸೇರಿದಂತೆ ಕಾಲೇಜಿನ ಎಲ್ಲ ವಿಭಾಗ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ಯೋಗೆಂದ್ರಸಿಂಗ್ ಸ್ವಾಗತಿಸಿದರು, ವಿದ್ಯಾಸಾಗರ ನಿರೂಪಿಸಿದರು ಹಾಗೂ ನೀಕತ್ ಫಾತಿಮಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X