ಬೀದರ್ | ಸತತ ಅಧ್ಯಯನದಿಂದ ಯಶಸ್ಸು ಸಾಧ್ಯ: ಸಿಇಓ ಗಿರೀಶ ಬದೋಲೆ

Date:

Advertisements

ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಶೈಕ್ಷಣಿಕ ಪ್ರಗತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರಂತರ ಶ್ರಮಿಸುತ್ತಿದೆ ಎಂದು ಬೀದರ್ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ನುಡಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿಲಯಪಾಲಕರು, ನಿಲಯ ಮೇಲ್ವಿಚಾರಕರು, ಕಿರಿಯ ನಿಲಯ ಮೇಲ್ವಿಚಾರಕರು ಹಾಗೂ ‘ಡಿ ಗ್ರೂಪ್’ ಸಿಬ್ಬಂದಿಗಳಿಗಾಗಿ ಜಿಲ್ಲಾ ಕನ್ನಡ ಭವನದಲ್ಲಿ ಆಯೋಜಿಸಿದ ವಿಶೇಷ ಪುನಶ್ಚೇತನ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಇಲಾಖೆ ಇನ್ನೂ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ಇಲಾಖೆಗೆ ಒಳ್ಳೆಯ ಹೆಸರು ತರಲು ಸಿಬ್ಬಂದಿ ಹೊಣೆಗಾರಿಕೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ವಸತಿ ಶಾಲೆ ಮತ್ತು ವಸತಿ ನಿಲಯಗಳ ಮಕ್ಕಳು ಎಸ್ಸೆಸ್ಸೆಲ್ಸಿ, ಪಿಯುಸಿ ಮಕ್ಕಳು ಅತಿ ಹೆಚ್ಚಿನ ಅಂಕ ಪಡೆದು‌ ಉತೀರ್ಣರಾಗುತ್ತಿರುವುದು ಶ್ಲಾಘನೀಯ. ಈ ಮಕ್ಕಳು ಮುಂದೆ ಐ.ಎ.ಎಸ್., ಕೆ.ಎ.ಎಸ್. ಹುದ್ದೆ ಪಡೆಯಲು ಈಗಿನಿಂದಲೇ ಪೂರ್ವ ತಯ್ಯಾರಿ ನಡೆಸಬೇಕು. ಸತತ ಅಭ್ಯಾಸ ಮತ್ತು ಸಮರ್ಪಣಾ ಮನೋಭಾವ ಮಾತ್ರ ಜೀವನದಲ್ಲಿ ಯಶಸ್ಸು ತಂದುಕೊಡಬಲ್ಲವು ಎಂದು ಹೇಳಿದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗೀತಾ ಬಿರಾದಾರ ಮಾತನಾಡಿ, ‘ಮಕ್ಕಳಿಗೆ ಎಲ್ಲಾ ಸೌಕರ್ಯ ಇಲಾಖೆ ನೀಡುತ್ತಿದೆ. ಇದನ್ನು ಮಕ್ಕಳಿಗೆ ಸಮರ್ಪಕವಾಗಿ ತಲುಪಿಸಿ ಇಲಾಖೆಗೆ ಕೀರ್ತಿ ತರಬೇಕು’ ಎಂದು ‌ನುಡಿದರು.

ಆರೋಗ್ಯಕರ ಬೆಳವಣಿಗೆಗೆ ಗುಣಮಟ್ಟದ ಪೌಷ್ಠಿಕ ಆಹಾರದ ಪಾತ್ರ ಕುರಿತು ಮಾತನಾಡಿದ ಡಾ.ಸುಧೀರಾ ಸುಲಗುಂಟೆ ಮಾತನಾಡಿ, ಇಂದಿನ ಮಕ್ಕಳಿಗೆ ಆಹಾರ ಕ್ರಮದ ಬಗ್ಗೆ ಅರಿವಿಲ್ಲ. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಹೈ ಬಿ.ಪಿ., ಮಧುಮೇಹ ಸೇರಿದಂತೆ ಅನೇಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ನಿಲಯದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸುವಲ್ಲಿ ನಿಷ್ಕಾಳಜಿ ಮಾಡದಂತೆ ಅವರು ಸಲಹೆ ನುಡಿದರು.

ಗುಣಮಟ್ಟದ ಆಹಾರ ಸಾಮಗ್ರಿಗಳ ಸರಬರಾಜು ಶುಚಿ ರುಚಿಯಾದ ಆಹಾರ ತಯ್ಯಾರಿಕೆ ಕುರಿತು ವಿ.ಬಿ.ಹಿರೇಗೌಡರು ಹಾಗೂ ಅಗ್ನಿ ಅವಘಡ ತಡೆಯುವಿಕೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ನವೀನ್ ಬಾಬು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಗೌರಿಶಂಕರ ಮಕ್ಕಳ ರಕ್ಷಣಾಧಿಕಾರಿಗಳು ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ಶಾಲೆಗಳ ಪೈಕಿ ಅತ್ಯಧಿಕ ಅಂಕ ಪಡೆದ ಪ್ರವಾಲಿಕಾ ಭಾಸ್ಕರ ರೆಡ್ಡಿ, ಮಹಾದೇವ ಸಿದ್ದಪ್ಪ, ಹರೀಶ ಸಂತೋಷ, ಗಾಯತ್ರಿ ಅನಿಲ ಹಾಗೂ ಇತರೆ ನಿಲಯಾರ್ಥಿಗಳನ್ನು ಸತ್ಕರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್ | ದಲಿತರ ಮೇಲಿನ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಅಶೋಕ ಶೇರಿಕಾರ ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ವ್ಹಿ.ಬಿ ಹೀರೆಗೌಡರ್, ವಿಠಲ ಸೇಡಮಕರ್, ರವೀಂದ್ರ ಮೇತ್ರೆ ಮತ್ತು ಪ್ರಾಂಶುಪಾಲರಾದ ಚನ್ನಬಸವ ಹೇಡೆ, ನೀಲಕಂಠ ಕಾಂಬಳೆ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X