ಬೀದರ್‌ | ವಿವಾಹೇತರ ಸಂಬಂಧ ಶಂಕೆ : ಎರಡು ವರ್ಷದ ಮಗು ಕಣ್ಣೆದುರಲ್ಲೇ ದಂಪತಿ ಕೊಲೆ

Date:

Advertisements

ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಎರಡು ವರ್ಷದ ಮಗು ಕಣ್ಣೆದುರಲ್ಲೆ ದಂಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರು ಪಹಾಡ ಬಳಿ ಮಂಗಳವಾರ ನಡೆದಿದೆ.

ಬಸವಕಲ್ಯಾಣ ತಾಲ್ಲೂಕಿನ ಜಾಫರವಾಡಿ ನಿವಾಸಿ ರಾಜಕುಮಾರ್ ಕೊಳಸೂರೆ (28), ಸಾರಿಕಾ (23) ಕೊಲೆಯಾದ ದಂಪತಿ. ಅದೇ ತಾಲ್ಲೂಕಿನ ಯರಂಡಗಿ ಗ್ರಾಮದ ದತ್ತಾತ್ರೇಯ ಬಾಲೆ ಹಾಗೂ ತುಕಾರಾಮ ಚಿಟ್ಟಂಪಲ್ಲೆ ಕೊಲೆಗೈದದವರು.

ಕೊಲೆಯಾದ ರಾಜಕುಮಾರ್ ಆರೋಪಿ ದತ್ತಾತ್ರೇಯ ಅವರ ಸಹೋದರಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದು , ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಜೊತೆಗಿದ್ದ ಫೋಟೋಗಳನ್ನು ರಾಜಕುಮಾರ್ ಶೇರ್ ಮಾಡಿದ್ದ ಎಂದು ಹೇಳಲಾಗುತ್ತಿದೆ.

Advertisements

ರಾಜಕುಮಾರ್ ಕೊಲೆಗೆ ಸಂಚು ರೂಪಿಸಿದ ಆರೋಪಿಗಳು ಯುವತಿ ಕಡೆಯಿಂದ ಕರೆ ಮಾಡಿಸಿ ಮುಂಬೈಯಿಂದ ಊರಿಗೆ ಕರೆಸಿಕೊಂಡಿದ್ದಾರೆ. ನಿನ್ನೆ (ಏ.29) ಕೊಹಿನೂರು ಪಹಾಡ-ಲಾಡವಂತಿ ಸಮೀಪ ಮಾತನಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಚ್ಚಿನಿಂದ ಕತ್ತು ಸೀಳಿ ದಂಪತಿಯನ್ನು ಹತ್ಯೆಗೈದಿದ್ದಾರೆ.

ಜೊತೆಯಲ್ಲಿದ್ದ ಎರಡು ವರ್ಷದ ಮಗು ಕಣ್ಣೆದುರೇ ಪೋಷಕರನ್ನು ಕಳೆದುಕೊಂಡು ಅನಾಥ ಶವಗಳ ಎದುರು ಕುಳಿತಿದ್ದ ದೃಶ್ಯ ಮನಕಲಕುವಂತಿತ್ತು.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್​​ ಗುಂಟಿ, ಡಿವೈಎಸ್ಪಿ ಜೆ.ಎಸ್​​. ನ್ಯಾಮೆಗೌಡರ್​​, ಸಿಪಿಐ ಕೃಷ್ಣಕುಮಾರ ಪಾಟೀಲ್​, ಪಿಎಸ್​ಐ ಸುವರ್ಣ ಮಲ್ಲಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಕೊಲೆ ಆರೋಪಿಗಳಾದ ದತ್ತಾತ್ರಿ ಬಾಲೆ , ತುಕಾರಾಮ ಬಾಬುರಾವ್ ಹಾಗೂ ವಿವಾಹಿತ ಮಹಿಳೆಯೊಬ್ಬರ ವಿರುದ್ದ ಮಂಠಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

Download Eedina App Android / iOS

X